Advertisement

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

08:18 PM Jul 08, 2024 | Team Udayavani |

ಹೊಸದಿಲ್ಲಿ: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರ ಬೆಂಕಿ ಭಾಷಣದ ವೇಳೆ ಮಾಡಿದ ಟೀಕೆಗಳಿಗೆ ಉತ್ತರಾಖಂಡದ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲ ನೀಡಿದ್ದಾರೆ.

Advertisement

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ವಿರುದ್ಧ ಕಿಡಿ ಕಾರಿ ‘ಹಿಂದೂಗಳು ಎಂದು ಹೇಳಿಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ’ ಎಂದು ಹೇಳಿಕೆ ನೀಡಿದಾಗ ವಿವಾದ ಭುಗಿಲೆದ್ದಿತ್ತು. ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸ್ವಾಮೀಜಿ ‘ ರಾಹುಲ್ ಗಾಂಧಿಯವರ ಭಾಷಣವು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ ಎಂದು ಪ್ರತಿಪಾದಿಸಿದರು. ನಾವು ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ಕೇಳಿದ್ದೇವೆ, ಅವರು ಹಿಂದೂ ಧರ್ಮದಲ್ಲಿ ಹಿಂಸೆಗೆ ಸ್ಥಳವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ರಾಹುಲ್ ಅವರ ಹೇಳಿಕೆಯ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಅದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next