Advertisement

ಮಠದಲ್ಲೇ ಸ್ವಾಮೀಜಿ ರಾಸಲೀಲೆ!; ರೊಚ್ಚಿಗೆದ್ದ ಭಕ್ತರು

09:33 AM Oct 26, 2017 | Team Udayavani |

ಬೆಂಗಳೂರು: ನಗರದ ಯಲಹಂಕದ ಹುಣಸಮಾರನಹಳ್ಳಿಯಲ್ಲಿರುವ ಶತಮಾನಗಳಷ್ಟು ಇತಿಹಾಸ ಹೊಂದಿರುವ ಮದ್ದೇವಣಾಪುರ ಮಹಾದೇವ ಸಂಸ್ಥಾನ ಮಠದ ಉತ್ತರಾಧಿಕಾರಿ ಎಂದು ಬಿಂಬಿತವಾಗಿದ್ದ ಗುರುನಂಜೇಶ್ವರ ಸ್ವಾಮೀಜಿ  ನಟಿಯೊಬ್ಬಳೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಬಹಿರಂಗವಾಗಿ ಭಾರೀ ಸದ್ದು ಮಾಡಿದೆ.

Advertisement

ಮಠದ ಹಾಲಿ ಪೀಠಾಧಿಪತಿಯಾಗಿರುವ ಶೀವಾಚರ್ಯ ಸ್ವಾಮೀಜಿ ಪುತ್ರನಾಗಿರುವ ದಯಾನಂದ ಎಂಬಾತ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯಗಳ ವಿಡಿಯೋಗಳು ಗುರುವಾರ ಮಾಧ್ಯಮಗಳಲ್ಲಿ ಬಿತ್ತರವಾಗಿವೆ. ಮಠದ ಕೋಣೆಯಲ್ಲೇ ರಾಸಲೀಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ.

 ವೀರಶೈವ ಪರಂಪರೆಯ ಮಠಕ್ಕೆ  ಶಿವಾಚಾರ್ಯ ಶ್ರೀಗಳು 2011ರಲ್ಲಿ ಉತ್ತರಾಧಿಕಾರಿಯನ್ನಾಗಿ ತನ್ನ ಪುತ್ರ ದಯಾನಂದನ್ನೇ ನೇಮಕಮಾಡಿಕೊಂಡಿದ್ದರು. ಕೋಟ್ಯಂತರ ರೂಪಾಯಿ ಆಸ್ತಿಯ ಮೇಲೆ ಕಣ್ಣಿಟ್ಟು ಮಗನಿಗೆ ಪಟ್ಟ ಕಟ್ಟಿದ್ದರು ಎಂದು ಭಕ್ತರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು ಎಂದು ತಿಳಿದು ಬಂದಿದೆ.

ಇದೀಗ ದಯಾನಂದನ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕಿದ್ದಿದ್ದು, ತಕ್ಷಣ ಮಠ ಬಿಟ್ಟು ತೆರಳಿ ಬೇರೆ ಸಭ್ಯ ಉತ್ತರಾಧಿಕಾರಿಯನ್ನು ನೇಮಿಸಬೇಕು, ಶ್ರೀಶೈಲ ಶಾಖಾ ಪೀಠದ ಶ್ರೀಗಳು ಮಠಕ್ಕೆ ಆಗಮಿಸಿ ಮಾತುಕತೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದಾರೆ. 

ರೊಚ್ಚಿಗೆದ್ದ ಭಕ್ತರು 
ಮಠದ ಎದುರು ನೂರಾರು ಭಕ್ತರು ಜಮಾವಣೆಗೊಂಡಿದ್ದು  ಪ್ರತಿಭಟನೆ ನಡೆಸುವ ಮೂಲಕ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸ್ವಾಮೀಜಿ ಮತ್ತು ಮಗನ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ. 

Advertisement

ನೆಲ ಮಾಳಿಗೆಯಲ್ಲಿ ಅಡಗಿಕೊಂಡಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಕೂಡಲೇ ತಂದೆ, ಮಗ ಮಠ ಬಿಟ್ಟು ತೆರಳಬೇಕು ,ನಾವು ಹೊಸ ಉತ್ತರಾಧಿಕಾರಿ ವಟುವನ್ನು ನೇಮಿಸುತ್ತೇವೆ ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ. 

ಸ್ಥಳಕ್ಕೆ 100ಕ್ಕೂ ಹೆಚ್ಚು ಪೊಲೀಸರನ್ನು ಕರೆಸಿಕೊಂಡು ಭದ್ರತೆ ಕೈಗೊಳ್ಳಲಾಗಿದೆ. ಮಠದ ಬಾಗಿಲು ಒಡೆಯಲ ಮುಂದಾದ ಉದ್ರಿಕ್ತರನ್ನು ಪೊಲೀಸರು ತಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next