Advertisement

ಸಿಎಂ ಬಿಎಸ್ ವೈ ನಿವಾಸಕ್ಕೆ ದೌಡಾಯಿಸಿದ ವಿಜಯಪುರದ 40 ಸ್ವಾಮೀಜಿಗಳು!

04:35 PM Feb 09, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ವಿಜಯಪುರ ಜಿಲ್ಲೆಯ ಸುಮಾರು 40 ಮಂದಿ ಸ್ವಾಮೀಜಿಗಳ ನಿಯೋಗ ಭೇಟಿ ನೀಡಿತು.

Advertisement

ವಿಜಯಪುರ ಜಿಲ್ಲಾ ಮಠಾಧೀಶರ ಒಕ್ಕೂಟದಿಂದ ಸ್ವಾಮೀಜಿಗಳು ಬೆಂಗಳೂರಿಗೆ ಆಗಮಿಸಿ ಜಿಲ್ಲೆಯ ವಿವಿಧ ಬೇಡಿಕೆ ಈಡೇರಿಸಲು ಮನವಿ ಪತ್ರವನ್ನು ಸಿಎಂ ಯಡಿಯೂರಪ್ಪನವರಿಗೆ ನೀಡಿದರು.

ಇದನ್ನೂ ಓದಿ:ಪೇಜಾವರ ಶ್ರೀಗಳಿಂದ ರಾಜ್ಯಪಾಲರ ಭೇಟಿ

ವಿಜಯಪುರ ಜಿಲ್ಲೆಯನ್ನು ಸಮಗ್ರ ನೀರಾವರಗೆ ಒಳಪಡಿಸುವ ಮತ್ತು ಈಗಾಗಲೇ ಚಾಲ್ತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವುದು ಹಾಗೂ ವೀರಶೈವ ಲಿಂಗಾಯತ ಒಳ ಪಂಗಡಗಳಿಗೆ ಮೀಸಲಾತಿ ಕಲ್ಪಿಸಿಕೊಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಮುಂದಿರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next