Advertisement

ಮೋದಿಯಿಂದ ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಸಿಹಿ ಸುದ್ದಿ

09:53 AM Jan 04, 2020 | Sriram |

ಮೈಸೂರು: ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಪ್ರಧಾನಿಯವರು ನೀಡಿದ ಭೇಟಿಗೆ ಸಿಕ್ಕ ಪ್ರಚಾರವನ್ನು ಸಹಿಸಲು ಕಾಂಗ್ರೆಸ್‌ ನಾಯಕರು ಮತ್ತು ಎಚ್‌.ಡಿ.ಕುಮಾರಸ್ವಾಮಿಗೆ ಆಗುತ್ತಿಲ್ಲ. ಅದಕ್ಕಾಗಿ ಮೊಸರಲ್ಲಿ ಕಲ್ಲು ಹುಡುಕುತ್ತಾ ಮೈಪರಚಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಮೋದಿ ಅವರು ಎರಡು ಬಾರಿ ತುಮಕೂರಿನ ಸಿದ್ದಗಂಗಾ ಕ್ಷೇತ್ರಕ್ಕೆ ಬಂದಿರುವುದು ಹೆಮ್ಮೆಯ ವಿಚಾರ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಇದನ್ನು ಅರ್ಥ ಮಾಡಿಕೊಳ್ಳದೆ, ಪ್ರಧಾನಿಯವರ ಭಾಷಣದಲ್ಲಿ ತಪ್ಪು ಹುಡುಕುವುದು, ಯಾವುದೋ ವಿಚಾರಕ್ಕೆ ಇನ್ನೇನನ್ನೋ ಸೇರಿಸುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next