Advertisement

ಗಣತಂತ್ರ; ರಾಜಪಥದಲ್ಲಿ ಎಲ್ಲರ ಕಣ್ಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ

01:43 PM Jan 26, 2017 | Sharanya Alva |

ನವದೆಹಲಿ: ಈ ಬಾರಿ ನವದೆಹಲಿಯ ರಾಜಪಥ್ ನಲ್ಲಿ ನಡೆದ 68ನೇ ಗಣರಾಜ್ಯೋತ್ಸವ ಸಮಾರಂಭದ ಪಥ ಸಂಚಲನದಲ್ಲಿ ಜಾನಪದ ನೃತ್ಯ ಪ್ರಕಾರಗಲ ಸ್ತಬ್ಧಚಿತ್ರ ಪ್ರದರ್ಶನಗೊಂಡು ಎಲ್ಲರ ಗಮನಸೆಳೆಯಿತು. ಈ ಸ್ತಬ್ಧ ಚಿತ್ರದಲ್ಲಿ ವೀರಗಾಸೆ, ಕಂಸಾಳೆ, ಗೊರವರ ಕುಣಿತ, ಡೊಳ್ಳು ಕುಣಿತ, ಜಗ್ಗಲಗೆ, ದಾಸರಪದ, ನಂದಿಧ್ವಜದಂತಹ ಸಾಂಪ್ರದಾಯಿಕ ಜಾನಪದ ಪ್ರಕಾರಗಳು ಸ್ತಬ್ಧ ಚಿತ್ರದಲ್ಲಿ ಇದ್ದವು.

Advertisement

ಇದಕ್ಕಾಗಿ ರಾಜ್ಯದಿಂದ ಕಲಾವಿದರನ್ನು ಆಯ್ಕೆ ಮಾಡಿ ಕಳೆದ 15 ದಿನಗಳಿಂದ ಅಭ್ಯಾಸ ಮಾಡಲಾಗಿತ್ತು. ಕಲಾವಿದರು ತಾಳಕ್ಕೆ ಕುಣಿಯುತ್ತಾ ಸಂಸ್ಕೃತಿಯನ್ನು ಬಿಂಬಿಸಿದರು.

ರಾಜ್ಯದ ಪ್ರಸಿದ್ಧ ಕಲಾವಿದರಾದ ಶಶಿಧರ ಅಡಪ ಅವರ ಕೈಚಳಕದಲ್ಲಿ ರಾಜ್ಯದ ಸ್ತಬ್ಧಚಿತ್ರ ನಿರ್ಮಾಣವಾಗಿದ್ದು, ಒಂದು ತಿಂಗಳಿಂದ 25ಕ್ಕೂ ಹೆಚ್ಚು ಕಾರ್ಮಿಕರು ಇದಕ್ಕಾಗಿ ಕೆಲಸ ನಿರ್ವಹಿಸಿದ್ದರು. ವಿ. ಮನೋಹರ್‌ ಸ್ತಬ್ಧಚಿತ್ರಕ್ಕೆ ಹಿನ್ನೆಲೆ ಸಂಗೀತ, ಅಮರೇಶ್‌ ದೊಡ್ಡಮನಿ ಕಲಾವಿದರ ಉಸ್ತುವಾರಿ ನಡೆಸಿದ್ದಾರೆ. ಸ್ತಬ್ಧಚಿತ್ರದಲ್ಲಿ ಗೊರವರ ಕುಣಿತದ ಪ್ರತಿಮೆ ಎಲ್ಲಕ್ಕಿಂತ ದೊಡ್ಡದಾಗಿ ಬಿಂಬಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next