Advertisement

ಟಗರು ವಿವಾದ : ಸಿದ್ದರಾಮಯ್ಯ ಅವರ ಕ್ಷಮೆ ಕೇಳಿದ ಮುಕುಡಪ್ಪ

06:06 PM Nov 10, 2022 | Team Udayavani |

ಬೆಂಗಳೂರು : ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕುರಿತು ಅವಾಚ್ಯ ಪದ ಬಳಕೆ ವಿಚಾರ ಬಗ್ಗೆ ಕೆ.ಮುಕುಡಪ್ಪ ಅವರು ಪ್ರತಿಭಟನೆ ಮತ್ತು ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಗುರುವಾರ ಕ್ಷಮೆ ಕೇಳಿದ್ದಾರೆ.

Advertisement

ನಾನು ಮತ್ತು ಪುಟ್ಟಸ್ವಾಮಿ ಕುರಿ ಹಾಗೂ ಟಗರು ಬಗ್ಗೆ ಮಾತನಾಡುತ್ತಿದ್ದೆವು. ಸಿಎಂ ಬೊಮ್ಮಾಯಿ 20 ಕುರಿ ಹಾಗೂ ಒಂದು ಟಗರು ನೀಡುವ ಯೋಜನೆ ಬಗ್ಗೆ ಚರ್ಚೆ ಮಾಡುತ್ತಿದ್ದೆವು. ಆ ವೇಳೆ ಒಂದೇ ಟಗರು 20 ಕುರಿಗಳನ್ನು ನೋಡಿಕೊಳ್ಳುತ್ತದೆ.ಟಗರು ಸೂ..ಮಗಂದು ಬಲು ಗಟ್ಟಿ ಅಂದಿದ್ದು ನಿಜ. ಆದರೆ ಸಿದ್ದರಾಮಯ್ಯ ಬಗ್ಗೆ ಆ ಪದ ಹೇಳಿದ್ದೇನೆ ಎಂದು ಬಿಂಬಿಸಲಾಗಿದೆ ಎಂದರು.

ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುವೆ.ಸಿದ್ದರಾಮಯ್ಯ ಅವರು ಕುರುಬರ ಸಂಘ ಹಾಗೂ ಮಠ ಕಟ್ಟಿದ್ದಾರೆ.ಕುರುಬ ಸಮುದಾಯಕ್ಕೆ ಕೊಡುಗೆ ನೀಡಿದ್ದಾರೆ. ನಾನೂ ಆ ಸಂದರ್ಭದಲ್ಲಿ ಅವರ ಜೊತೆ ಇದ್ದೆ ಎಂದು ಹೇಳಿಕೆ ಕುರಿತು ವಿಷಾದ ವ್ಯಕ್ತ ಪಡಿಸಿದ್ದಾರೆ.

ಮುಕಡಪ್ಪ ಮತ್ತು ಪುಟ್ಟಸ್ವಾಮಿ ವಿರುದ್ಧ ಮುಕುಡಪ್ಪನವರ ನಿವಾಸದ ಎದುರು ಕುರುಬ ಸಮಾಜದ ಮುಖಂಡರು, ಸಿದ್ದರಾಮಯ್ಯರವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next