Advertisement

ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ಭೇಟಿ

07:58 AM Jul 28, 2020 | Suhan S |

ಹೊಸಕೋಟೆ: ತಾಲೂಕಿನ ಜಡಿಗೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಸೋಂಕಿತರಿಗಾಗಿ ಸ್ಥಾಪಿಸಿರುವ ಕ್ವಾರಂಟೈನ್‌ ಕೇಂದ್ರಕ್ಕೆ ತಹಶೀಲ್ದಾರ್‌ ವಿ.ಗೀತಾ ಭೇಟಿ ನೀಡಿ ಪರಿಶೀಲಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಸ್ವಪ್ರೇರಣೆಯಿಂದ ತಪಾಸಣೆಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೂ ತಪಾಸಣೆ ಕೈಗೊಳ್ಳಲಾಗಿದೆ.

ಜಡಿಗೇನಹಳ್ಳಿ ಕೇಂದ್ರದಲ್ಲಿ 42, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ 12 ಸೋಂಕಿತರು ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸಲು ಪ್ರತಿದಿನ ಪೌಷ್ಟಿಕ ಆಹಾರದೊಂದಿಗೆ ಹಣ್ಣು, ಗಂಜಿ ಯೊಂದಿಗೆ ಕಷಾಯ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆರೋಗ್ಯ ಇಲಾಖೆ ನಿಗದಿಪಡಿಸಿರುವ ನಿರ್ದೇಶನ ಪಾಲಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದು ಹಾಸಿಗೆ, ಬೆಡ್‌ಶೀಟ್‌, ಬಿಸಿ ನೀರು, ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಕೇಂದ್ರದಲ್ಲಿರುವವರು ವೈದ್ಯರು ನೀಡುವ ಮಾರ್ಗದರ್ಶನ ಪಾಲಿಸಿ ಸಕಾರಾತ್ಮಕ ಭಾವನೆ, ಆತ್ಮವಿಶ್ವಾಸ ಬೆಳೆಸಿಕೊಂಡಲ್ಲಿ ಬೇಗನೆ ಗುಣಮುಖರಾಗಲು ಸಾಧ್ಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next