Advertisement

ಸಮಸ್ಯೆ ಇದ್ದಲಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ 

12:46 PM Jun 30, 2017 | Team Udayavani |

ನಂಜನಗೂಡು: ಪರಸ್ಪರ ಘರ್ಷಣೆಗೆ ಒಳಗಾಗಿ ಒಬ್ಬರ ವಿರುದ್ಧ ಮತ್ತೂಬ್ಬರ ದೂರಿಗೆ ಕಾರಣವಾದ ತಾಲೂಕಿನ ನವಿಲೂರಿಗೆ ಸಂಸದ ಆರ್‌.ಧ್ರುವನಾರಾಯಣ ಹಾಗೂ ಶಾಸಕ ಕಳಲೆ ಕೇಶವ ಮೂರ್ತಿ ಭೇಟಿ ನೀಡಿ  ಸಭೆ ನಡೆಸಿ ಶಾಂತಿ ಸೌಹಾರ್ಧತೆ ಕುರಿತಂತೆ ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದರು.

Advertisement

ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಸಭೆಯಲ್ಲಿ ಸಂಸದ ಆರ್‌.ಧ್ರುವನಾರಾಯಣ ಮಾತನಾಡಿ, ವೈಯಕ್ತಿಕವಾಗಿ ಮಾಡಿರುವ ತಪ್ಪಿನ ಕಿಡಿ ಗ್ರಾಮವನ್ನು ವ್ಯಾಪಿಸುವುದು ಸರಿಯಲ್ಲ. ಇಂಥಹ ಘಟನೆಯಿಂದಾಗಿ ಇಬ್ಬರ ಜಗಳಕ್ಕೆ ಗ್ರಾಮದ ಗೌರವವೇ ಮಣ್ಣು ಪಾಲಾಗುವುದು ಆದ್ದರಿಂದ ಏನಾದರೂ ಸಮಸ್ಯೆ ಇದ್ದಲಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎಂದರು.

ತನಿಖೆ ಪ್ರಾರಂಭ: ಕಾನೂನು ಮೀರಿ ನಡೆಯುವವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಪೊಲೀಸರಿದ್ದಾರೆ ನೀವೆ ಕಾನೂನನ್ನು ಕೈ ತೆಗೆದುಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಘಟನೆಯ ಕುರಿತಂತೆ ತನಿಖೆ ಪ್ರಾರಂಭವಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ, ಅಲ್ಲಿಯವರಿಗೆ ಗ್ರಾಮಸ್ಥರು ಶಾಂತಿ ಭಂಗವಾಗದಂತೆ ಎಚ್ಚರ ವಹಿಸಿ ಎಂದರು.

ಧೃತಿಗೆಡುವ ಅಗತ್ಯವಿಲ್ಲ: ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಘಟನೆ ನಡೆದ ಮರುದಿನವೇ ನಾನು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದೆ. ಜಾತಿಯ ವಿಷಬೀಜ ಬಿತ್ತುವ ಕೆಲಸವಾಗಿಲ್ಲ. ಆಕಸ್ಮಿಕವಾಗಿ ನಡೆದ ವಿಷಯವೇ ಗಲಾಟೆಯ ರೂಪ ತಾಳಿದೆ ಘಟನೆ ಕುರಿತು ಪೊಲೀಸ್‌ ಠಾಣೆಯಲ್ಲಿ ಎರಡು ಕೋಮಿನಿಂದ ಪ್ರಕರಣ ದಾಖಲಾಗಿದೆ. ಹಾಗಾಗಿ ಗ್ರಾಮಸ್ಥರು ಧೃತಿಗೆಡುವ ಅಗತ್ಯವಿಲ್ಲ. ಹೊಂದಾಣಿಕೆ, ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮನವಿ ಮಾಡಿದರು.

ನವಿಲೂರು ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಘಟನೆ ನಂತರ ಎರಡು ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದೇನೆ. ಭಿನ್ನಾಭಿಪ್ರಾಯ ಮರೆತು ಸಹಜ ಜೀವನ ನಡೆಸುವುದಾಗಿ ವರು ಭರವಸೆ ನೀಡಿದ್ದಾರೆ. ಘಟನೆ ಬಗ್ಗೆ ಹೆಚ್ಚು ವಿಷಯ ಪ್ರಸ್ತಾಪಿಸಿದಷ್ಟೂ ದೊಡ್ಡದಾಗಿ ಬೆಳೆಯುತ್ತದೆ. ಹಾಗಾಗಿ ಚಿಗುರಿನಲ್ಲೇ ಚಿವುಟಿ ಹಾಕುವ ಪ್ರಯತ್ನ ಮಾಡಬೇಕು ಎಂದರು.

Advertisement

ತಾಪಂ ಅಧ್ಯಕ್ಷ ಬಿ.ಎಸ್‌.ಮಹದೇವಪ್ಪ, ಟಿಎಪಿಸಿಎಂಎಸ್‌ ಅಧ್ಯಕ್ಷ ಕುರಹಟ್ಟಿ ಮಹೇಶ್‌, ಅಖೀಲ ಭಾರತ ವೀರಶೈವ ಮಹಸಭಾ ತಾಲೂಕು ಅಧ್ಯಕ್ಷ ಎಚ್‌.ಕೆ.ಚನ್ನಪ್ಪ, ತಹಶೀಲ್ದಾರ್‌ ಎಂ.ದಯಾನಂದ್‌, ತಾಪಂ ಇಒ ಬಿ.ರೇವಣ್ಣ, ಸದಸ್ಯ ಸಿದ್ದರಾಜೇಗೌಡ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‌ರಾಜ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಜಿ.ಆರ್‌.ಶಿವಮೂರ್ತಿ, ಪಿಎಸ್‌ಐ ಟಿ.ಎನ್‌.ಪುನೀತ್‌, ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ, ವರ್ತಕರ ಸಂಘದ ಅಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next