Advertisement

ಪ್ರವಾಸೋದ್ಯಮ ಅಭಿವೃದ್ಧಿಗೆ ಕ್ರಮ ವಹಿಸಿ

06:47 PM Nov 18, 2020 | Suhan S |

ಹೊಸಪೇಟೆ: ಹಂಪಿಯಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ಮೂಲಭೂತ ಸೌಕರ್ಯ ಕಲ್ಪಿಸಲು ಕ್ರಮವಹಿಸಬೇಕು. ಈ ವೇಳೆ ಪಾರಂಪರಿಕ ಸ್ಮಾರಕಗಳಿಗೆ ಧಕ್ಕೆಯಾಗದಂತೆ ಕ್ರಮವಹಿಸಬೇಕು ಎಂದು ಹೊಸದಿಲ್ಲಿಯ ಭಾರತೀಯ ಪುರಾತತ್ವ ಇಲಾಖೆಯ ಡೈರೆಕ್ಟರ್‌ ಜನರಲ್‌ ವಿ. ವಿದ್ಯಾವತಿ ಹೇಳಿದರು.

Advertisement

ತಾಲೂಕಿನ ಕಮಲಾಪುರದ ಕ್ಲರ್ಕ್‌ ಇನ್‌ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಹಂಪಿ ಅಭಿವೃದ್ಧಿ ಕುರಿತ ಮಹತ್ವದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಂಪಿ ಅಭಿವೃದ್ಧಿಗೆ ಸಮಗ್ರ ನಿರ್ವಹಣಾ ಯೋಜನೆ (ಐಎಂಪಿ) ಜಾರಿ ಮಾಡಿದ್ದು, ಇದರನ್ವಯ ಕ್ರಮವಹಿಸಬೇಕು.ಹಂಪಿಯ ಸ್ಮಾರಕಗಳ ಬಳಿ 300 ಮೀಟರ್‌ ವ್ಯಾಪ್ತಿಯಲ್ಲಿ ಮೂಭೂತ ಸೌಕರ್ಯ ಒದಗಿಸಲು ಅಡ್ಡಿ ಇಲ್ಲ. ಆದರೆ, ಚಾರಿತ್ರಿಕ ಸ್ಮಾರಕಗಳಿಗೆಧಕ್ಕೆಯಾಗಬಾರದು. ಹಂಪಿಗೆ ಆಗಮಿಸುವ ದೇಶ-ವಿದೇಶಿ ಪ್ರವಾಸಿಗರ ಹಿತದೃಷ್ಟಿಯಿಂದ ಪಾರ್ಕಿಂಗ್‌ ವ್ಯವಸ್ಥೆ, ಶೌಚಾಲಯ, ಕುಡಿವ ನೀರು ವ್ಯವಸ್ಥೆ ಮಾಡಬೇಕು. ಜತೆಗೆ ಪಾರಂಪರಿಕರಸ್ತೆಗಳನ್ನು ನಿರ್ಮಿಸಬೇಕು. ಹಂಪಿ ಸ್ಮಾರಕಗಳ ಸೊಬಗನ್ನು ಇಡೀ ವಿಶ್ವಕ್ಕೆ ಉಣ ಬಡಿಸುವ ಕೆಲಸದಲ್ಲಿ ಎಲ್ಲಾ ಇಲಾಖೆಗಳು ಒಂದೇ ಛತ್ರದಡಿ ಕೆಲಸ ಮಾಡಬೇಕು ಎಂದರು.

ಸ್ಮಾರಕಗಳ ಜೀರ್ಣೋದ್ಧಾರ ಮಾಡಿ: ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇಗುಲದ ರಥಬೀದಿಯಸಾಲು ಮಂಟಪಗಳ ಜಿರ್ಣೋದ್ಧಾರ ಕೆಲಸ ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ಹಂಪಿಯಲ್ಲಿನ ಐತಿಹಾಸಿಕ ಸ್ಮಾರಕಗಳ ಜೀಣೋದ್ಧಾರಕ್ಕೆ ಕ್ರಮವಹಿಸಬೇಕು. ಹಂಪಿ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ. ಯೋಜನೆ ರೂಪಿಸಿ ವರದಿ ಕಳುಹಿಸಿದರೆ ಶೀಘ್ರವೇ ಮಂಜೂರಾತಿ ನೀಡಲಾಗುವುದು ಎಂದು ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಭಾರತೀಯ ಪುರಾತತ್ವ ಇಲಾಖೆಯ ಜಂಟಿನಿರ್ದೇಶಕ ಜಾನ್ವಿತ್‌ ಶರ್ಮಾ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ರಮೇಶ್‌, ಬಳ್ಳಾರಿಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ, ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್‌ ವಿಕಾಸ ಕಿಶೋರ್‌, ಹಂಪಿ ನಿರ್ವಹಣಾ ಪ್ರಾಧಿಕಾರ ಪ್ರಭಾರ ಆಯುಕ್ತ ತನ್ವೀರ್‌ ಶೆಕ್‌ ಆಸಿಫ್‌, ಭಾರತೀಯ ಪುರಾತತ್ವ ಇಲಾಖೆಯ ಹಂಪಿ ವಲಯದ ಅಧಿಕಾರಿ ಕಾಳಿಮುತ್ತು, ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರು ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಇದಕ್ಕೂ ಮುನ್ನ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲ ಸೇರಿದಂತೆ ಹಂಪಿ ತುಂಗಭದ್ರಾ ನದಿ ಭಾಗಕ್ಕೆ ಭೇಟಿ ನೀಡಿ ಅಭಿವೃದ್ಧಿ ಕುರಿತು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next