Advertisement
ಹೇರೂರು ಭಾಗದ ಸದಸ್ಯ ಎನ್.ಕೆ. ಉದಯ ವಿಷಯ ಪ್ರಸ್ತಾಪಿಸಿ ಹೇರೂರು ಭಾಗದಲ್ಲಿ ಇತ್ತೀಚೆಗೆ ಮಂಗನ ಕಾಯಿಲೆ ಸೋಂಕು ಇರುವ ಉಣುಗು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿ ಮಹೇಂದ್ರ ಕಿರೀಟಿ, ತಾಲೂಕಿನ ಹೇರೂರಿನ ಹಾಡುಗಾರು ಭಾಗದ ಇಬ್ಬರ ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಪೈಕಿ ಒಬ್ಬರಿಗೆ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ.
Related Articles
Advertisement
ಎಲ್ಲಾ ದಾಖಲೆಗಳು ಸರಿಯಾಗಿದ್ದರೂ ಅಲ್ಲಿನ ಪಿಡಿಒ ಅರ್ಜಿಗಳನ್ನು 3 ಸಲ ವಜಾ ಮಾಡಿದ್ದಾರೆ. ಕಾರಣ ಏನು ತಿಳಿಸಿ? ಇಲ್ಲದಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುತ್ತೇವೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಇಲಾಖೆಯ ಶೇಷಮೂರ್ತಿ, ಅರ್ಜಿಗಳ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಅಸಗೋಡು ಪಂಚಾಯತ್ ಪಿಡಿಒ ವಿರುದ್ಧ ತುಂಬಾ ದೂರುಗಳಿದ್ದು ಜಿಲ್ಲಾಧಿಕಾರಿಗಳು ಅವರನ್ನು ಬೇರೆಡೆ ವರ್ಗಾವಣೆ ಮಾಡಿದ್ದಾರೆ. ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇನೆ. ಇಲಾಖೆ ವತಿಯಿಂದ ಲೋಪವಾಗಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕೃಷಿ ಅಧಿಕಾರಿಗಳು ತಮ್ಮ ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು. ಉಳಿದಂತೆ ಇತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು. ಉಪಾಧ್ಯಕ್ಷೆ ಜೆ.ಎಸ್. ಲಲಿತಾ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಂ.ಕೆ. ಕಿರಣ, ಸದಸ್ಯರಾದ ಮಂಜುಳಾ ಮಂಜುನಾಥ್, ಬಿ.ಕೆ. ಕೃಷ್ಣಯ್ಯ ಶೆಟ್ಟಿ, ಮಧುರಾ ಶಾಂತಪ್ಪ, ಬಿ. ಸುಧಾಕರ್, ಇಂದಿರಾ ಉಮೇಶ್, ಭವಾನಿ ಆರ್. ಹೆಬ್ಟಾರ್, ಇಒ ಕೆ. ಗಣಪತಿ ಉಪಸ್ಥಿತರಿದ್ದರು.ಈಗಾಗಲೇ ತಾಲೂಕಿನಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿರುವುದರಿಂದ ತಾಲೂಕಿನ ಜನತೆ ಆತಂಕದಲ್ಲಿದ್ದಾರೆ. ಕೂಡಲೇ ಲಸಿಕೆ ತರಿಸಿಕೊಳ್ಳಲು ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಭ ಧೋರಣೆ ಸರಿಯಲ್ಲ. ಕಾಡು ಪ್ರದೇಶದ ಜನರಿಗೆ ಡಿಎಂಪಿ
ಎಣ್ಣೆ ವಿತರಿಸಬೇಕು.
ಜಯಂತಿ ನಾಗರಾಜ್, ತಾಪಂ ಅಧ್ಯಕ್ಷೆ