Advertisement

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಯೋಜನೆ ಲಾಭ ಪಡೆಯಿರಿ

02:43 PM Apr 25, 2022 | Team Udayavani |

ಸಿರುಗುಪ್ಪ: ರಾಜ್ಯದ ಎಲ್ಲ ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸುವ ಉದ್ದೇಶದಿಂದ ಪಂಚಾಯತ್‌ ರಾಜ್‌ ದಿವಸ್‌ ಅಂಗವಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ವಿಶೇಷ ಗ್ರಾಮ ಸಭೆಯನ್ನು ಹಮ್ಮಿಕೊಳ್ಳಲಾಗಿದೆಂದು ತಾಲೂಕು ನರೇಗಾ ಯೋಜನೆ ನಿರ್ದೇಶಕಿ ರಾಜೇಶ್ವರಿ ತಿಳಿಸಿದರು.

Advertisement

ತಾಲೂಕಿನ ಕರೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಂಚಾಯಿತಿ ರಾಜ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತರು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಯೋಜನೆಯಡಿಯಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆಯದೆ ಇರುವ ಅರ್ಹ ರೈತರಿಗೆ ಕ್ರೆಡಿಟ್‌ ಕಾರ್ಡ್‌ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬ್ಯಾಂಕ್‌ ಅಧಿಕಾರಿಗಳು, ನಬಾರ್ಡ್‌ ಪ್ರತಿನಿ ಧಿಗಳು ಮತ್ತು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರತಿಯೊಬ್ಬ ರೈತರಿಗೆ ಈ ಯೋಜನೆ ಬಗ್ಗೆ ಮಾಹಿತಿ ನೀಡಲಾಗುತ್ತದೆಂದು ಹೇಳಿದರು.

ಕೃಷಿ ಅಧಿಕಾರಿ ಪರಮೇಶ್ವರ ರೆಡ್ಡಿ ಮಾತನಾಡಿ, ರೈತರು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ನ್ನು ಪಡೆಯಲು ಆಧಾರ ಕಾರ್ಡ್‌ ಮತ್ತು ಪಹಣಿ ದಾಖಲೆಗಳು ಬೇಕಾಗುತ್ತದೆ. ಸಿಸಿ ಸೇವಾ ಕೇಂದ್ರಗಳಲ್ಲಿ, ಬ್ಯಾಂಕ್‌ಗಳಲ್ಲಿ, ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿ ಕ್ರೆಡಿಟ್‌ ಕಾರ್ಡ್‌ನ್ನು ಪಡೆಯಬಹುದು. ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆದ ರೈತರ ಸಾಲಕ್ಕೆ ಬ್ಯಾಂಕ್‌ನಲ್ಲಿ ಶೇ. 2% ರಷ್ಟು ಬಡ್ಡಿದರದಲ್ಲಿ 3ಲಕ್ಷ ಸಾಲವನ್ನು ನೀಡಲಾಗುತ್ತಿದ್ದು, ಸಕಾಲಕ್ಕೆ ಈ ಸಾಲವನ್ನು ಮರುಪಾವತಿ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ, ಪಿಡಿಒ ಶಿವಪ್ಪ, ಸದಸ್ಯರು, ರೈತರು, ಸಾರ್ವಜನಿಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next