Advertisement

ಯೋಜನೆ ಲಾಭ ಪಡೆದು ಆರ್ಥಿಕ ಸಬಲರಾಗಿ: ಡಿಸಿ

11:28 AM Nov 12, 2021 | Team Udayavani |

ಯಾದಗಿರಿ: ರಾಜ್ಯ-ಕೇಂದ್ರ ಸರ್ಕಾರಗಳ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಉದ್ಯೋಗಿನಿ ಯೋಜನೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯ ಬಳಕೆಯಾಗದ ಅನುದಾನದಡಿ ಹಾಗೂ ದೇವದಾಸಿ ಪುರ್ವಸತಿ ಯೋಜನೆಯಡಿ 2021-22ನೇ ಸಾಲಿನ ಆದಾಯ ಉತ್ಪನ್ನ ಚಟುವಟಿಕೆ ಹಾಗೂ ಉತ್ಪನ್ನ ಚಟುವಟಿಕೆ ಪರಿಶಿಷ್ಟ ಜಾತಿ-ಪಂಗಡ ಉಪಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಸರ್ಕಾರದ ಯೋಜನೆ ಸದುಪಯೋಗ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಚೇತನ ಯೋಜನೆಯಡಿ 9, ಧನಶ್ರೀ ಯೋಜನೆಯಡಿ 11, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ 15, ಉದ್ಯೋಗಿನಿ ಯೋಜನೆಯಡಿ 24, 2021-22ನೇ ಸಾಲಿನ ಆದಾಯ ಉತ್ಪನ್ನ ಚಟುವಟಿಕೆ-7 ಹಾಗೂ ಆದಾಯ ಉತ್ಪನ್ನ ಚಟುವಟಿಕೆ ಪರಿಶಿಷ್ಟ ಜಾತಿ-ಪಂಗಡ ಉಪಯೋಜನೆಯಡಿ-5 ಫಲಾನುಭವಿಗಳು ಆಯ್ಕೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಭಾಕರ್‌ ಕವಿತಾಳ, ಜಿಲ್ಲಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಕೆ.ಎನ್‌. ಸಿದ್ದೇಶ್ವರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಯಾದಗಿರಿ ನಿರೀಕ್ಷಕಿ ಶಿವಮಂಗಳಾ. ಎಂ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಮಚಂದ್ರ ಗೊಳಾ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next