Advertisement

ಗ್ರಾಮ ಒನ್‌ ಕೇಂದ್ರದ ಲಾಭ ಪಡೆಯಿರಿ: ಶಾಸಕ ಖಾಶೆಂಪುರ

11:49 AM Jan 27, 2022 | Team Udayavani |

ಬೀದರ: ತಾಲೂಕಿನ ಕಪಲಾಪುರ (ಎ) ಗ್ರಾಮದಲ್ಲಿ ನಾಗಕರಿ ಸೇವಾ ಕೇಂದ್ರ ಗ್ರಾಮ ಒನ್‌ ಕೇಂದ್ರಕ್ಕೆ ಬುಧವಾರ ಶಾಸಕ ಬಂಡೆಪ್ಪ ಖಾಶೆಂಪುರ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ಗ್ರಾಮ ಒನ್‌ ಕೇಂದ್ರ ತೆರೆಯಲಾಗಿದೆ. ಈ ಮೂಲಕ ಹಲವಾರು ಸರ್ಕಾರಿ ಸೇವೆಗಳನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಮಾತನಾಡಿ, ಪ್ರತಿಯೊಬ್ಬರಿಗೂ ಕೂಡ ಆರೋಗ್ಯ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಆರೋಗ್ಯ ಕಾರ್ಡ್‌ ಗಳನ್ನು ಪಡೆಯಬೇಕು. ಗ್ರಾಮ ಒನ್‌ ಸೇವಾ ಕೇಂದ್ರದ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರು ಸಾರ್ವಜನಿಕರ ಅಹವಾಲು ಆಲಿಸಿದರು. ಹಿರಿಯ ನಾಗರಿಕರಿಗೆ ಮತ್ತು ವಿಕಲಚೇತನರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಜಿಪಂ ಸಿಇಒ ಜಹೀರಾ ನಸೀಮ್‌, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next