Advertisement

ಅಪಘಾತಗಳ ಸಂಖ್ಯೆ ಕಡಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಿ

09:38 PM Dec 21, 2022 | Team Udayavani |

ಸುವರ್ಣ ವಿಧಾನಸೌಧ: ದಾವಣಗೆರೆ ಭಾಗದಲ್ಲಿನ ಅಪಘಾತಗಳ ಸಂಖ್ಯೆ ಕಡಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಭಾಗದ ರಸ್ತೆ ಕಾಮಗಾರಿಗಳಿಗೆ ಎಷ್ಟು ಹಣ ಬಿಡುಗಡೆಯಾಗಿದೆ ಎಂದು ಕಾಂಗ್ರೆಸ್‌ ಸದಸ್ಯ ಕೆ.ಅಬ್ದುಲ್‌ ಜಬ್ಟಾರ್‌ ಅವರು ವಿಧಾನ ಪರಿಷತ್ತಿನಲ್ಲಿ ಪ್ರಶ್ನಿಸಿದರು.

Advertisement

ಇದಕ್ಕೆ ಉತ್ತರಿಸಿದ ಸಚಿವ ಸಿ.ಸಿ.ಪಾಟೀಲ್‌, ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಹೊರತು ಪಡೆಸಿ ಎಸ್‌ಸಿಪಿ/ಟಿಎಸ್‌ಪಿ ಅಡಿಯಲ್ಲಿ ರಾಜ್ಯಕ್ಕೆ ಬರಬೆಕಿದ್ದ 850 ಕೋಟಿ ರೂ. ಬಂದಿಲ್ಲ. ಅದನ್ನು ರಾಜ್ಯದಲ್ಲಿ ಬಡವರ ಮಕ್ಕಳಿಗೆ ಅಂಬೇಡ್ಕರ್ ಮತ್ತು ಕ್ರಿಸ್ಟ ಹಾಸ್ಟೆಲ್‌ ಕಟ್ಟಲು ನೀಡಲಾಗಿದೆ. ಜೊತೆಗೆ ಬೆಂಗಳೂರು- ತುಮಕೂರು ಮಧ್ಯೆ ಇರುವ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next