Advertisement

ಶಾಲಾ ಕಟ್ಟಡ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಿ

02:21 PM Jun 24, 2022 | Team Udayavani |

ದೇವನಹಳ್ಳಿ: ತಾಲೂಕಿನ ಯಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡವನ್ನು ಶೀಘ್ರವೇ ದುರಸ್ತಿ ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ಕೆ.ರೇವಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ತಾಲೂಕಿನ ಯಂಬ್ರಹಳ್ಳಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿದ ಅವರು, ಪ್ರಸ್ತುತ ಅಂಗನವಾಡಿ ಕಟ್ಟಡಕ್ಕೆ 3.5 ಲಕ್ಷ ರೂ. ವೆಚ್ಚದಲ್ಲಿ ಶೇಟ್‌ ಹಾಕಿ ತಾತ್ಕಾಲಿಕವಾಗಿ 1ರಿಂದ 5ನೇ ತರಗತಿವರೆಗೆ ತರಗತಿಗಳಿಗೆ ವ್ಯವಸ್ಥೆ ಮಾಡಿಕೊಡುವಂತೆ ಗ್ರಾಪಂಗೆ ತಿಳಿಸಲಾಗಿದೆ.

ಯಂಬ್ರಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಶಿಥಿಲವಾಗಿದ್ದು, ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲು ವರದಿ ತಯಾರಿಸುವಂತೆ ಸೂಚಿಸಲಾಗಿದೆ. ಶಾಲಾ ಕಟ್ಟಡದ ಮೇಲ್ಛಾವಣಿ ಕಲ್ಲಿನ ಚಪ್ಪಡಿಯಾಗಿದ್ದು, ಮಳೆಗಾಲದಲ್ಲಿ ಸೋರುತ್ತಿರುವ ಹಿನ್ನೆಲೆ ಮಕ್ಕಳಿಗೆ ಪಕ್ಕದ ಶಾಲಾ ಕಟ್ಟಡದಲ್ಲಿ ಪಾಠ ಪ್ರವಚನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಎಸ್‌ಡಿಎಂಸಿ ನಿಧಿ ಬಳಸಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜಿಪಂ ವತಿಯಿಂದ ನೀಡಲಾಗುವ ಅನುದಾನವನ್ನು ಸೂಕ್ತವಾಗಿ ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿಯತ್ತ ಶಿಕ್ಷಕರು ಗಮನಹರಿಸಿ, ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಮಕ್ಕಳ ಕಲಿಕೆಗೆ ಅವಶ್ಯಕತೆ ಇರುವ ಟೇಬಲ್ , ಬೆಂಜ್, ಕುರ್ಚಿ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳಿಗಾಗಿ ಎಸ್‌ಡಿಎಂಸಿ ನಿಧಿಯನ್ನು ಬಳಕೆ ಮಾಡಲು ಅವಕಾಶವಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಮಾರ್ಗದರ್ಶನ ಪಡೆದು ಶಾಲಾ ಅಭಿವೃದ್ಧಿಗೆ ಅಗತ್ಯ ಕೆಲಸ ಮಾಡುವಂತೆ ನಿರ್ದೇಶಿಸಿದರು.

ಅನುದಾನ ಬಳಸಿಕೊಳ್ಳಿ: ಪ್ರತಿ ಶಾಲೆಗೂ ಸಂಚಿತ ನಿಧಿ ನೀಡಲಾಗಿದೆ. ಮಕ್ಕಳ ನಿತ್ಯದ ಆಹಾರಕ್ಕೆ ಅಗತ್ಯವಿರುವ ಖರ್ಚು ವೆಚ್ಚವನ್ನು ಸಂಚಿತ ನಿಧಿಯ ಅನುದಾನ ಬಳಸಿಕೊಳ್ಳಿ. ಯಾವ ಹಣವನ್ನು ಯಾವ ಕಾರ್ಯಗಳಿಗೆ ಉಪಯೋಗಿಸಬಹುದು ಎಂಬುದರ ಕುರಿತು ಮಾಹಿತಿ ಪಡೆದು,
ಅನುಷ್ಠಾನಕ್ಕೆ ತರಲು ಮುಂದಾಗಿ ಎಂದರು.

Advertisement

ಕಾರಹಳ್ಳಿ ಗ್ರಾಪಂ ಅಧ್ಯಕ್ಷೆ ಚಂದ್ರಿಕಾ, ಎನ್‌.ರವಿ, ಯಂಬ್ರಹಳ್ಳಿ ಎಂಪಿಸಿಎಸ್‌ ಅಧ್ಯಕ್ಷ ಮಾರೇಗೌಡ, ಸದಸ್ಯರಾದ ಜನಕಮಣಿ, ಕೇಶವಮೂರ್ತಿ, ಸುಬ್ರಮಣಿ, ಪಿಡಿಒ ಎಸ್‌.ಕವಿತಾ, ಕಾರ್ಯದರ್ಶಿ ಯಶೋ ಧಾ ಕುಮಾರ್‌, ತಾಪಂ ಸಹಾಯಕ ಅಧಿಕಾರಿ ಸುನೀಲ್‌, ಐಇಸಿ ಸಂಯೋಜಕ ಪ್ರಕಾಶ್‌, ಶಾಲಾ ಮುಖ್ಯ ಶಿಕ್ಷಕಿ ಎ.ಎಸ್‌.ಅಕ್ಕಮಹಾದೇವಿ, ಸಹ ಶಿಕ್ಷಕಿ ಅಸ್ಕರಿ ಬೇಗಂ ಹಾಗೂ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next