Advertisement
ಮನವಿಯ ವಿವರ ಹೀಗಿದೆ ಪ್ರಮುಖವಾಗಿ ಮನೆಯನ್ನು ಕಳೆದುಕೊಂಡ ನಿರಾಶ್ರಿತರಿಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದರೂ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಸಂತ್ರಸ್ತರು ಅತಂತ್ರ ಸ್ಥಿತಿಯನ್ನೇ ಎದುರಿಸುತ್ತಿದ್ದಾರೆ. ಮಳೆಗಾಲ ಆರಂಭವಾಗಲು ಇನ್ನು ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ನೂತನ ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಬೇಕು, ಜಿಲ್ಲೆಯಲ್ಲಿನ ರಸ್ತೆಗಳು, ಸೇತುವೆಗಳು, ಕೆರೆ ಕಟ್ಟೆಗಳು ಕೊಚ್ಚಿ ಹೋಗಿದ್ದು, ಈಗಾಗಲೇ ದುರಸ್ತಿ ಕಾರ್ಯ ಕೆಲವೇ ಗ್ರಾಮಗಳಲ್ಲಿ ನಡೆಯುತ್ತಿದೆ. ಇನ್ನುಳಿದ ಗ್ರಾಮಗಳಿಗೆ ಈಗಲೂ ರಸ್ತೆ ಸಂಪರ್ಕ ಇಲ್ಲದೆ ರೈತರು ತಮ್ಮ ಜಮೀನಿಗೆ ಹೋಗಿ ವ್ಯವಸಾಯ ಮಾಡಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದಾರೆ. ತಕ್ಷಣ ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಎಲ್ಲ ಗ್ರಾಮಗಳ ರಸ್ತೆಗಳನ್ನು ದುರಸ್ತಿಪಡಿಸಬೇಕು, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಫಿ ಬೆಳೆಗಾರರೇ ವಾಸಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಅಂದಾಜು 9482.61 ಲಕ್ಷ ರೂ ವೆಚ್ಚದ ಬೆಳೆ ನಷ್ಟವಾಗಿದೆ. ಬೆಳೆಗಾರರು ಹಾಗೂ ರೈತರು ಬೆಳೆನಷ್ಟದಿಂದ ಕಂಗಾಲಾಗಿದ್ದು, ಇಲ್ಲಿಯವರೆಗೆ ಯಾವುದೇ ಪರಿಹಾರ ದೊರೆತ್ತಿಲ್ಲ. ಕೆಲವು ರೈತರಿಗೆ ಮಾತ್ರ ಪರಿಹಾರ ದೊರೆತ್ತಿದ್ದು, ಬಹುತೇಕರು ವಂಚಿತರಾಗಿದ್ದಾರೆ. ಈ ಕಾರಣದಿಂದ ತಕ್ಷಣ ಬೆಳೆನಷ್ಟ ಪರಿಹಾರವನ್ನು ವಿತರಿಸಬೇಕು, ಜಮೀನು ಕಳೆದುಕೊಂಡ ರೈತರಿಗೆ ಪರ್ಯಾಯ ಭೂಮಿಯನ್ನು ಇಲ್ಲಿಯವರೆಗೆ ನೀಡಿಲ್ಲ, ಖಾಲಿ ಇರುವ ಸರಕಾರಿ ಜಮೀನನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.
Related Articles
ಜಮೀನು ಕಳೆದುಕೊಂಡ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಬಿಪಿಎಲ್ ಕಾರ್ಡ್ ನೀಡಬೇಕು, ಕೆಲವು ಭಾಗಗಳ ಗುಡ್ಡಗಳು ಬಿರುಕು ಬಿಟ್ಟಿದ್ದು, ಅಪಾಯ ಎದುರಾಗುವ ಮುನ್ಸೂಚನೆ ಇದೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಪರ್ಯಾಯವಾಗಿ ಸೂಕ್ತ ಜಾಗದಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಶಾಸಕರು ಮನವಿ ಮಾಡಿದರು.
Advertisement