Advertisement

ಧರ್ಮವನ್ನು ಲೆಕ್ಕಿಸದೆ ದ್ವೇಷ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಿ: ಸುಪ್ರೀಂ

07:10 PM Oct 21, 2022 | Team Udayavani |

ನವದೆಹಲಿ : ದ್ವೇಷದ ಭಾಷಣಗಳನ್ನು ಅತ್ಯಂತ ಗಂಭೀರ ವಿಷಯ ಎಂದು ಕರೆಡಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರಕಾರಗಳಿಗೆ ದೂರು ಸಲ್ಲಿಸುವ ವರೆಗೆ ಕಾಯದೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ನಿರ್ದೇಶಿಸಿದೆ.

Advertisement

ಆಡಳಿತದ ಕಡೆಯಿಂದ ಯಾವುದೇ ವಿಳಂಬವು ನ್ಯಾಯಾಲಯದ ನಿಂದನೆಯನ್ನು ಆಹ್ವಾನಿಸುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠವು ಶಾಹೀನ್ ಅಬ್ದುಲ್ಲಾ ಎಂಬ ವ್ಯಕ್ತಿ ಸಲ್ಲಿಸಿದ ಅರ್ಜಿಯ ಮೇರೆಗೆ ಎರಡು ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ರಾಷ್ಟ್ರದ ಜಾತ್ಯತೀತ ರಚನೆಯನ್ನು ಕಾಪಾಡಲು ಅವರ ಧರ್ಮವನ್ನು ಲೆಕ್ಕಿಸದೆ ದ್ವೇಷದ ಭಾಷಣಗಳನ್ನು ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next