Advertisement

ಉತ್ತಮ ಫಲಿತಾಂಶಕ್ಕೆ ಪೂರಕ ಕ್ರಮ ಕೈಗೊಳ್ಳಿ : ಗೋವಿಂದ ಕಾರಜೋಳ

11:47 AM Sep 11, 2019 | Suhan S |

ನೆಲಮಂಗಲ: ನೆಲಮಂಗಲದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ  ಗೋವಿಂದ ಕಾರಜೋಳ ರವರು ಇಂದು‌ ದಿಢೀರ್ ಭೇಟಿ  ನೀಡಿ ಪರಿಶೀಲನೆ ನಡೆಸಿದರು.

Advertisement

ಈ ವೇಳೆ ಹಾಸ್ಟೆಲ್ ಮುಂದೆ ಇದ್ದ ಕಸದ ರಾಶಿ ನೋಡಿ ಅಧಿಕಾರಿಗಳ ಮೇಲೆ ಕಿಡಿಕಾರಿದರು. ಕೂಡಲೇ ಕಸ ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಸ್ಟೆಲ್ ವ್ಯವಸ್ಥೆಯ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲಿಸಿದರು.

ವಸತಿ ನಿಲಯಗಳಲ್ಲಿ  ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಎಲ್ಲಾ ಸೌಲಭ್ಯಗಳನ್ನು‌ ವ್ಯವಸ್ಥಿತವಾಗಿ  ನೀಡಬೇಕು. ವಿದ್ಯಾರ್ಥಿಗಳಿಗೆ  ಪರೀಕ್ಷಾ ಪೂರ್ವ ಸಿದ್ದತೆ ಹಾಗೂ  ಉತ್ತಮ ಫಲಿತಾಂಶಕ್ಕೆ ಪೂರಕ ಕ್ರಮ ಕೈಗೊಳ್ಳಬೇಕು ಎಂದು ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next