Advertisement

ಕಾವೇರಿ ತೀಥೋìದ್ಭವ ಹಿನ್ನೆಲೆ: ತಲಕಾವೇರಿ-ಭಾಗಮಂಡಲ ಸ್ವತ್ಛತೆ

12:28 AM Oct 17, 2019 | Team Udayavani |

ಭಾಗಮಂಡಲ: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಕ್ಷೇತ್ರದಲ್ಲಿಅ.18 ರಂದು ಸಂಭವಿಸುವ ಪವಿತ್ರ ಕಾವೇರಿ ತೀಥೋìದ್ಭವ ಹಿನ್ನೆಲೆಯಲ್ಲಿ ಮಂಗಳವಾರ ಗ್ರೀನ್‌ ಸಿಟಿ ಫೋರಂ ಸಂಘಟನೆ ನೇತೃತ್ವದಲ್ಲಿ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವತ್ಛತಾ ಕಾರ್ಯ ನಡೆಯಿತು. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು, ಕ್ಲೀನ್‌ ಕೂರ್ಗ್‌ ಇನ್ಸೆಟಿವ್‌ (ಸಿಸಿಐ) ಸಂಘಟನೆ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

Advertisement

ತಲಕಾವೇರಿ ಕ್ಷೇತ್ರದ ಪ್ರವೇಶದ್ವಾರದಿಂದ ಸ್ವತ್ಛತೆ ಪ್ರಾರಂಭಿಸಲಾಯಿತು. ರಸ್ತೆ ಎರಡು ಬದಿಯಲ್ಲಿದ್ದ ಬಾಟಲಿ, ಪ್ಲಾಸ್ಟಿಕ್‌ ವಸ್ತುಗಳನ್ನು ಹೆಕ್ಕುವುದರ ಮೂಲಕ ಸ್ವತ್ಛಗೊಳಿಸಲಾಯಿತು. ಈ ವೇಳೆ ವಾಹನಗಳಲ್ಲಿ ಆಗಮಿಸಿದ ಪ್ರವಾಸಿಗರಿಗೆ ಸ್ವತ್ಛತೆ ಕಾಪಾಡುವಂತೆ ಮನವಿ ಮಾಡಲಾಯಿತು. ದಕ್ಷಿಣ ಭಾರತದ ಜೀವನದಿ ಕಾವೇರಿ ಕ್ಷೇತ್ರವನ್ನು ಸ್ವತ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶ ರವಾನಿಸಲಾಯಿತು. ನಾಲ್ಕು ವರ್ಷದಿಂದ ಕಾವೇರಿತೀಥೋìದ್ಭವಕ್ಕೆ ಮುನ್ನ ತಲಕಾವೇರಿಯಿಂದ ಭಾಗಮಂಡಲದವರೆಗೂ ಸ್ವತ್ಛತೆ ಮಾಡಲಾಗುತ್ತಿದೆ. ನಮ್ಮ ನಡೆ ಸ್ವತ್ಛತೆ ಕಡೆ ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದ ಸ್ವತ್ಛತೆ ಮಾಡಲಾಗುತ್ತಿದೆ ಎಂದು ಗ್ರೀನ್‌ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹೇಳಿದರು.

ಸ್ವತ್ಛತೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಪವಿತ್ರ ಕ್ಷೇತ್ರವನ್ನು ಸ್ವತ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರು ಮುತುವರ್ಜಿ ವಹಿಸಬೇಕೆಂದು ಗ್ರೀನ್‌ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಹೇಳಿದರು.

ಪ್ರತಿಯೊಬ್ಬರ ಸಹಕಾರದಿಂದ ಸ್ವತ್ಛತೆ ಕಾಪಾಡಲು ಸಾಧ್ಯವಾಗಿದೆ. ಹಲವು ವರ್ಷಗಳಿಗೆ ಹೋಲಿಸಿದ್ದಲ್ಲಿ ಈಗ ಸ್ವತ್ಛತೆ ಬಗ್ಗೆ ಜಾಗೃತಿ ಮೂಡಿದೆ. ಪ್ರತಿಯೊಂದು ಸ್ಥಳದಲ್ಲಿಯೂ ಸ್ವತ್ಛತಾ ಕಾರ್ಯಕ್ರಮ ನಡೆಯುತ್ತಿದೆ ಎಂದು ಕ್ಲೀನ್‌ ಕೂರ್ಗ್‌ ಇನ್ಸೆಟಿವ್‌ ಪ್ರಮುಖರಾಡ ಬಡುವಂಡ ಅರುಣ್‌ ಅಪ್ಪಚ್ಚು ಹೇಳಿದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಉತ್ಪಾದನೆ ಮೊದಲು ನಿಲ್ಲಿಸಬೇಕು. ಸ್ನೇಹಿ ವಸ್ತುಗಳನ್ನು ಮಾತ್ರ ಬಳಸುವಂತಾಗಬೇಕು. ಎಂದು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್‌ ಹೇಳಿದರು.

ಇರಾನಿ ಪ್ರಜೆಸ್ವತ್ಛತೆ
ಒಂದು ತಿಂಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಇರಾನಿ ಪ್ರಜೆ ನಾದೀರ್‌ ಖಾನ್‌ ಸ್ವತ್ಛತೆಯಲ್ಲಿ ಪಾಲ್ಗೊಂಡಿದ್ದು ವಿಶೇಷ. ನಮ್ಮ ವಾತಾವರಣವನ್ನು ಸ್ವತ್ಛವಾಗಿಟ್ಟುಕೊಳ್ಳ ಬೇಕೆಂಬ ಆಸಕ್ತಿ ಪ್ರತಿಯೊಬ್ಬರಲ್ಲಿಯೂ ಇರಬೇಕು. ನಿರುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವುದು ಒಳ್ಳೆಯದಲ್ಲ. ಇಂತಹ ಮನಸ್ಥಿತಿ ಮೊದಲು ದೂರವಾಗಬೇಕೆಂದು ಖಾನ್‌ ಹೇಳಿದರು. ಸ್ವಯಂ ಸೇವಾ ಸಂಘಟನೆಗಳು, ವಿದ್ಯಾರ್ಥಿಗಳು ಸ್ವತ್ಛತೆ ಮಾಡುವುದರ ಮೂಲಕ ಜನಜಾಗೃತಿ ಮೂಡಿಸಲು ಮುಂದಾಗಿರುವುದು ಶ್ಲಾಘನೀಯ. ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next