Advertisement

Talapady: ಹೆದ್ದಾರಿ ದಾಟಲು ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ

09:06 PM Jul 09, 2024 | Team Udayavani |

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ಹೆದ್ದಾರಿ ದಾಟಲು ನಿಂತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯೊಬ್ಬರಿಗೆ ಕಾರೊಂದು ಢಿಕ್ಕಿಯಾಗಿ ಗಾಯಗೊಂಡ ಘಟನೆ ಜು. 7ರಂದು ನಡೆದಿದೆ.

Advertisement

ಉತ್ತರಪ್ರದೇಶದ ಬರುನಬಲ್ಲಿಯಾ ನಿವಾಸಿ ಹಿರಲಾಲ್‌ ಬಿಂದ ಗಾಯಗೊಂಡು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಕಾರನ್ನು ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ  ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next