Advertisement

ಬಸ್‌ ಪ್ರಯಾಣ ದರ ಏರಿಕೆ ಬಗ್ಗೆ ಚರ್ಚೆ

10:53 PM Aug 28, 2019 | Lakshmi GovindaRaj |

ಬೆಂಗಳೂರು: ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯನ್ನು ಗುರುವಾರ ಕರೆಯಲಾಗಿದ್ದು, ಬಸ್‌ ಪ್ರಯಾಣ ದರ ಏರಿಕೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಡಾಲರ್ ಕಾಲೋನಿ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಚರ್ಚಿಸಿದ ಬಳಿಕ ಪ್ರತಿಕ್ರಿಯಿಸಿದರು.

Advertisement

ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್‌ ವ್ಯವಸ್ಥೆ ಮಾಡ ಲಾಗಿದೆ. ಜನರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗ ದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಹಬ್ಬದ ಹಿನ್ನೆಲೆಯಲ್ಲಿ ನಿಯೋಜಿಸಿರುವ ಹೆಚ್ಚುವರಿ ವಿಶೇಷ ಬಸ್‌ ಪ್ರಯಾಣ ದರವನ್ನು ಅಷ್ಟೇನೂ ಹೆಚ್ಚಳ ಮಾಡಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next