Advertisement

Jagadish shettar ಟಿಕೆಟ್ ಬಗ್ಗೆ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ: ಪ್ರಹ್ಲಾದ ಜೋಶಿ

12:47 PM Apr 14, 2023 | Team Udayavani |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ. ಈ ಕುರಿತು ಅವರು ಹಾಗೂ ನಾನು ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Advertisement

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರ ಆಗತ್ತದೆ ಎಂದರು.

ಇದನ್ನೂ ಓದಿ:ಮೊಜಾಂಬಿಕ್‌ನಲ್ಲಿ ‘Made In India’ ರೈಲಿನಲ್ಲಿ ಸವಾರಿ ಮಾಡಿದ ಸಚಿವ S Jaishankar

ಪಕ್ಷದಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದರು. ಹೀಗಾಗಿ ಒಂದಿಷ್ಟು ಗೊಂದಲಗಳು ಆಗಿವೆ. ಎಲ್ಲವನ್ನು ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸುತ್ತೇವೆ. 52 ಹೊಸ ಮುಖಗಳ ಅವಕಾಶ ನೀಡುವ ಮೂಲಕ‌ ಯುವಕರು ಇಗೆ ಆದ್ಯತೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಂತೆ ವಂಶಕ್ಕೆ ಟಿಕೆಟ್ ಕೊಡುವುದಿಲ್ಲ. ಅಪ್ಪ‌ಮಕ್ಕಳಿಗೆ ಟಿಕೆಟ್ ಕೊಡುವುದಿಲ್ಲ. ಉಂಟಾಗಿರುವ ಗೊಂದಲಗಳನ್ನು ಶೀಘ್ರದಲ್ಲಿ ಬಗೆಹರಿಸಲಾಗುವುದು. ನಮ್ಮ ಪಕ್ಷದ ಕಾರ್ಯಕರ್ತರು ಭಾವಾನಾತ್ಮಕ ಜೀವಿಗಳು ಎಂದು ತಿಳಿಸಿದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಹೋಗಬಾರದು ಎನ್ನುವ ಆಪೇಕ್ಷೆ ಇದೆ. ಅದೊಂದು ಯೂಸ್ ಆ್ಯಂಡ್ ಥ್ರೋ ಪಕ್ಷವಾಗಿದೆ. ಅವರಿಗೆ ಬಿಜೆಪಿಯಲ್ಲಿ ಅವರಿಗೆ ಉತ್ತಮ ಭವಿಷ್ಯವಿದೆ. ಅವರು ದಯವಿಟ್ಟು ಅಲ್ಲಿಗೆ ಹೋಗಬಾರದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next