Advertisement

Kundapura ತಲ್ಲೂರು : ಕುಸಿದು ಬಿದ್ದು 12ರ ಬಾಲಕ ಸಾವು

08:10 PM Oct 21, 2023 | Team Udayavani |

ಕುಂದಾಪುರ: ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್‌ ಶೆಟ್ಟಿ (12) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಅ.21ರಂದು ತಲ್ಲೂರಿನಲ್ಲಿ ಸಂಭವಿಸಿದೆ.

Advertisement

ಶನಿವಾರ ಬೆಳಗ್ಗೆ 8.45ರ ಸುಮಾರಿಗೆ ತಲ್ಲೂರಿನ ಮನೆ ಬಳಿ ಶಾಲಾ ಬಸ್ಸಿಗಾಗಿ ಕಾಯುತ್ತಿದ್ದು, ಬಸ್‌ ಬಂದಾಗ ಹತ್ತುವ ವೇಳೆ ಅಸ್ವಸ್ಥಗೊಂಡು, ಕುಸಿದು ಬಿದ್ದಿದ್ದು, ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ, ಬೆಳಗ್ಗೆ 10.20ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.

ಈತ ಹಟ್ಟಿಯಂಗಡಿ ಸಿದ್ದಿವಿನಾಯಕ ವಸತಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದು, ಕಲಿಕೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಕ್ರಿಯಾಶೀಲನಾಗಿದ್ದ. ಶುಕ್ರವಾರವಷ್ಟೇ ಆತ ಹುಟ್ಟುಹಬ್ಬವನ್ನು ಆಚರಿಸಿದ್ದು, ಶನಿವಾರ ಸಾವನ್ನಪ್ಪಿರುವುದು ಮಾತ್ರ ದುರಂತ.

ಇಬ್ಬರು ಮಕ್ಕಳು ಸಾವು
ಅರುಣ್‌ ಕುಮಾರ್‌ ದಂಪತಿಗೆ ಇಬ್ಬರು ಮಕ್ಕಳಿದ್ದು, ಪುತ್ರಿ ಅನುಶ್ರೀ (13) ಕಳೆದ ವರ್ಷದ ಅ.27ರಂದು ಮನೆಯಲ್ಲಿ ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಈಗ ಪುತ್ರನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಸಾವಿಗೆ ನಿಖರ ಕಾರಣವೇನೆಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ತಿಳಿದಯ ಬರಬಹುದು. ತಂದೆ ಅರುಣ್‌ ಕುಮಾರ್‌ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next