Advertisement

ಕಾರ್ಕಳ : ಸಭೆಗೆ ತಡವಾಗಿ ಬಂದ ಅಧಿಕಾರಿಯನ್ನು ಹೊರಕ್ಕೆ ಕಳುಹಿಸಿದ ಇಂಧನ ಸಚಿವ

05:28 PM Aug 09, 2021 | Team Udayavani |

ಕಾರ್ಕಳ : ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿಯನ್ನು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳುಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.

Advertisement

ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ ಸಭೆ ಸೋಮವಾರ ಕಾರ್ಕಳ ತಾ.ಪಂ ಸಾಮರ್ಥ್ಯ ಸೌಧದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆ ಆರಂಭದ ವೇಳೆ ಜಲಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿ ಸಚಿವರು ಮಾಹಿತಿ ಬಯಸಿ ಇಲಾಖೆಯಿಂದ ಮಾಹಿತಿ ನೀಡುವಂತೆ ಕೇಳಿದರು. ಆ ವೇಳೆ ಸಭೆಯಲ್ಲಿ ಆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಯೆ ಇರಲಿಲ್ಲ. ಅಧಿಕಾರಿ ಗೈರು ಹಾಜರಾದ ಬಗ್ಗೆ ಗರಂ ಆದ ಸಚಿವರು ಉಳಿದ ಇಲಾಖೆ ಮಾಹಿತಿ ಕೇಳಲಾರಂಬಿಸಿದರು.

ಸಭೆ ನಡೆದ ತುಂಬಾ ಹೊತ್ತಿನ ಬಳಿಕ ಜಲಜೀವನ್ ಇಲಾಖೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಆಗಮಿಸಿದ್ದರು ಅವರು ಸಭಾಂಗಣ ಒಳಗೆ ಬರುವುದನ್ನು ಕಂಡ ಸಚಿವರು ಸಭೆಯಿಂದ ಹೊರಹೋಗುವಂತೆ ಸೂಚಿಸಿದರು.

ಇದನ್ನೂ ಓದಿ :ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 125 ಅಂಕ ಜಿಗಿತ, 16 ಸಾವಿರ ಅಂಕ ದಾಟಿದ ನಿಫ್ಟಿ

Advertisement

ಸಭೆ ಮುಗಿದು ಹೊರ‌ಬರುವ ವೇಳೆಗೆ ಹೊರಗೆ ನಿಂತಿದ್ದ ಅಧಿಕಾರಿಯನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಬದ್ದತೆಯಿಂದ ಕೆಲಸ ಮಾಡುವಂತೆ ಸನ್ನಡತೆಯ ಪಾಠ ಭೋದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next