Advertisement

ಬಜಪೆ ಕಂದಾವರದಲ್ಲಿ ಟೆಕ್ಸ್ ಟೈಲ್ ಉದ್ಯಮಿಯ ಮೇಲೆ ತಲವಾರು ದಾಳಿ

01:30 PM Nov 16, 2020 | keerthan |

ಬಜಪೆ: ಟೆಕ್ಸ್ ಟೈಲ್ ಉದ್ಯಮಿಯೋರ್ವರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರಲ್ಲಿ ರವಿವಾರ ರಾತ್ರಿ ನಡೆದಿದೆ.

Advertisement

ಹಲ್ಲೆಗೊಳಗಾದ ವ್ಯಕ್ತಿಯನ್ನು ಕಂದಾವರ ಕೈಕಂಬ ನಿವಾಸಿ ಅಬ್ದುಲ್ ಅಜೀಜ್ (58) ಎಂದು ಗುರುತಿಸಲಾಗಿದೆ. ಇವರು ರವಿವಾರ ರಾತ್ರಿ ನಮಾಜ್ ಮುಗಿಸಿ ಮನೆಗೆ ತೆರಳುವ ಸಂದರ್ಭ ದಾಳಿ ಮಾಡಲಾಗಿದೆ.

ರಾತ್ರಿ 10.30 ರ ಸುಮಾರಿಗೆ ಅಬ್ದುಲ್ ಅಜೀಜ್ ನಮಾಜ್ ಮುಗಿಸಿ ಕಾರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಯುವಕರು ಇದ್ದಕ್ಕಿದ್ದಂತೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಅಬ್ದುಲ್ ಅವರ ತಲೆ, ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ:8 ತಿಂಗಳ ಬಳಿಕ ಮಂಗಳೂರು-ಕಾಸರಗೋಡು ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭ

ಗಾಯಗೊಂಡ ಅಬ್ದುಲ್ ಅಜೀಜ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಬಜಪೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next