Advertisement

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸ್ವಾಮಿ ದರ್ಶನ ಪಡೆದ ತಮಿಳು ನಿರ್ದೇಶಕ ಅಟ್ಲೀ   

01:19 PM Jul 24, 2021 | Team Udayavani |

ಮರ್ಷಲ್, ಬಿಗಿಲ್ ಸಿನಿಮಾಗಳ ಖ್ಯಾತಿಯ ತಮಿಳು ಸ್ಟಾರ್ ನಿರ್ದೇಶಕ ಅಟ್ಲೀ ಕುಮಾರ್ ಇಂದು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಿಯಾ ಕೂಡ ಜೊತೆಗಿದ್ದಾರೆ.

Advertisement

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.

ಇನ್ನು ರಾಜಾ ರಾಣಿ ಸಿನಿಮಾ ಚೊಚ್ಚಲ ಸಿನಿಮಾದಲ್ಲಿಯೇ ಯಶಸ್ಸು ಪಡೆದ ಅಟ್ಲೀ ತಿರುಗಿ ನೋಡಿದ ಉದಾಹರಣೆ ಇಲ್ಲ. ತಮಿಳಿನ ಸೂಪರ್ ಸ್ಟಾರ್ ದಳಪತಿ ವಿಜಯ್ ಜೊತೆ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಿರುವ ಇವರು ಎಲ್ಲ ಸಿನಿಮಾಗಳಲ್ಲೂ ಭರ್ಜರಿ ಗೆಲುವು ಪಡೆದಿದ್ದಾರೆ.

ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ನಿರ್ದೇಶಕ ಅಟ್ಲೀ ಬಾಲಿವುಡ್ ನ ಸೂಪರ್ ಸ್ಟಾರ್ ಕಿಂಗ್ ಖಾನ್ ಶಾರುಖ್ ಖಾನ್ ಜೊತೆ ಸಿನಿಮಾ ಮಾಡಲು ತಯಾರಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದ್ದು, ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ. ಅಲ್ಲದೇ ಶಾರುಖ್ ಮತ್ತು ಅಟ್ಲೀ ಸಿನಿಮಾಗೆ ನಯನತಾರಾ ನಾಯಕಿ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next