Advertisement

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು

11:05 PM Oct 15, 2024 | Team Udayavani |

ಚೆನ್ನೈ: ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜಧಾನಿ ಚೆನ್ನೈ, ತಿರುವಳ್ಳೂರು, ಕಂಚೀಪುರಂ, ಚೆಂಗಲಪಟ್ಟು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೂ ಅಡತಡೆ ಉಂಟಾಗಿದೆ.

Advertisement

ಪ್ರತಿಕೂಲ ಹವಾಮಾನದಿಂದಾಗಿ 5 ವಿಮಾನಗಳ ಸಂಚಾರ ರದ್ದುಗೊಳಿಸಲಾಗಿದ್ದು, ವ್ಯಾಸರಪಾಡಿ ರೈಲು ನಿಲ್ದಾಣ ಜಲಾವೃತಗೊಂಡ ಹಿನ್ನೆಲೆಯಲ್ಲಿ ಚೆನ್ನೈ- ಮೈಸೂರು ಕಾವೇರಿ ಎಕ್ಸ್‌ಪ್ರೆಸ್‌ ಸೇರಿ 4 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಇನ್ನೂ ಎರಡು ದಿನ ಮಳೆಯ ಆರ್ಭಟ ಹೀಗೇ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಅಲ್ಲದೇ ಅವಶ್ಯ ಸೇವೆಗಳನ್ನು ಹೊರತು ಪಡಿಸಿ ಮಿಕ್ಕೆಲ್ಲ ಸರಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಐಟಿ ಉದ್ಯೋಗಿಗಳಿಗೆ 18ರವರೆಗೆ ವರ್ಕ್‌ ಫ್ರಂ ಹೋಂ ನೀಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಆದೇಶಿಸಿದ್ದಾರೆ. ಏತನ್ಮಧ್ಯೆ, ತಮಿಳುನಾಡಿನಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next