Advertisement

Tamil Nadu ಕಾರು ಅಪಘಾತ; ಹುಣಸೂರು ವ್ಯಕ್ತಿ ಸಾವು,ಇಬ್ಬರಿಗೆ ಗಾಯ

11:17 PM Jun 15, 2023 | Team Udayavani |

ಹುಣಸೂರು: ತಮಿಳುನಾಡಿನಲ್ಲಿ ನಡೆದ ಕಾರು ಅಪಘಾತದಲ್ಲಿ ಹುಣಸೂರು ತಾಲೂಕಿನ ರತ್ನಪುರಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Advertisement

ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ನಿವಾಸಿ ನಾಸೀರ್ (46)ಸಾವನ್ನಪ್ಪಿದ ದುರ್ದೈವಿ. ಇವರಿಗೆ ಪತ್ನಿ. ಇಬ್ಬರು ಮಕ್ಕಳಿದ್ದಾರೆ. ಸ್ನೇಹಿತರಾದ ಸಿಕಂದರ್ ಹಾಗೂ ಮುಜೀಬ್( ಮುಜು) ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಸ್ನೇಹಿತರು ಕೆಲಸದ ನಿಮಿತ್ತ ತಮಿಳುನಾಡಿನ ಕೊಯಮುತ್ತೂರಿಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಬನ್ನಾರಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಬಾಗ ನಜ್ಜು ಗುಜ್ಜಾಗಿದ್ದು. ತೀವ್ರಗಾಯಗೊಂಡ ಚಾಲಕ ನಾಸೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಾಹನಗಳವರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳು ನೀಡಿದ ಮಾಹಿತಿಯನ್ನಾಧರಿಸಿ ಕುಟುಂಬದವರಿಗೆ ಮಾಹಿತಿ ನೀಡಿದ ಮೇರೆಗೆ ಕೊಯಮುತ್ತೂರಿಗೆ ಕುಟುಂಬದವರು ತೆರಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಂಜೆ ನಾಸೀರ್ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next