Advertisement

ನಿರ್ಭಯ ಹಂತಕರನ್ನು ಗಲ್ಲಿಗೇರಿಸುವ ವ್ಯಕ್ತಿ ಸಿಕ್ಕಿದರು !

10:03 AM Dec 12, 2019 | Team Udayavani |

ನವದೆಹಲಿ: ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರು ಹಂತಕರನ್ನು ಗಲ್ಲಿಗೇರಿಸುವ ಪೂರ್ವತಯಾರಿ ತಿಹಾರ್ ಜೈಲಿನಲ್ಲಿ ನಡೆಯುತ್ತಿದೆ. ಈಗಾಗಲೇ ಅಪರಾಧಿಗಳನ್ನು ಗಲ್ಲಿಗೇರಿಸಲು ಅಗತ್ಯವಾಗಿರುವ ನೇಣು ಕುಣಿಕೆಯನ್ನು ತಯಾರಿಸುವಂತೆ ಬಿಹಾರದ ಬಕ್ಸರ್ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Advertisement

ಈ ನಡುವೆ ಗಲ್ಲಿಗೇರಿಸುವ ವ್ಯಕ್ತಿಗಾಗಿ ಹುಡುಕಾಟ ನಡೆದಿರುವ ಮಧ್ಯೆಯೇ ತಮಿಳುನಾಡು ಪೊಲೀಸ್ ಇಲಾಖೆಗೆ ಸೇರಿದ ಹೆಡ್ ಕಾನ್ ಸ್ಟೇಬಲ್ ಒಬ್ಬರು ಸ್ವಯಂಪ್ರೇರಣೆಯಿಂದ ಈ ಕಾರ್ಯವನ್ನು ನಡೆಸಲು ಮುಂದೆ ಬಂದಿದ್ದಾರೆ.

42 ವರ್ಷ ಪ್ರಾಯದ ಎಸ್. ಸುಭಾಷ್ ಶ್ರೀನಿವಾಸನ್ ಅವರೇ ಈ ವ್ಯಕ್ತಿಯಾಗಿದ್ದು, ಇವರು ಪೊಲೀಸ್ ಶೌರ್ಯ ಪದಕ ವಿಜೇತರಾಗಿದ್ದಾರೆ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಇಂಡಿಯನ್ ನ್ಯಾಷನಲ್ ಆರ್ಮಿಯಲ್ಲಿ ಸೈನಿಕರಾಗಿದ್ದ ವ್ಯಕ್ತಿಯ ಮೊಮ್ಮಗನಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next