Advertisement

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

09:35 AM Oct 27, 2021 | Team Udayavani |

ನವದೆಹಲಿ:ಪಟಾಕಿ ಮಾರಾಟ ಅಂಗಡಿಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯ ಶಂಕರಪುರಂ ನಗರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

ಅಂಗಡಿ ಮಾಲೀಕರೂ ಸ್ಫೋಟದಲ್ಲಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಯನ್ನು ತೆರೆಯಲಾಗಿದ್ದು, ಈ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಕಲ್ಲಾಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಟಾಕಿ ಸ್ಫೋಟ ಘಟನೆ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಸಾವನ್ನಪ್ಪಿರುವ ಕುಟುಂಬ ಸದಸ್ಯರಿಗೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದವು ಎಂದು ವರದಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next