Advertisement

ತಮಿಳುನಾಡು: ನಡು ರಸ್ತೆಯಲ್ಲೇ  ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಮುಖಂಡನ ಥಳಿಸಿ ಹತ್ಯೆ

11:14 AM Feb 01, 2023 | Team Udayavani |

ಚೆನ್ನೈ: ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಹಿರಿಯ ಮುಖಂಡನನ್ನು ಥಳಿಸಿ ಹತ್ಯೆಗೈದಿರುವ ಘಟನೆ ಮಧುರೈನಲ್ಲಿ ಮಂಗಳವಾರ ರಾತ್ರಿ (ಜ.31 ರಂದು) ನಡೆದಿದೆ.

Advertisement

ಆಭರಣ ಅಂಗಡಿಯ ಮಾಲೀಕ ಮತ್ತು ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ದಕ್ಷಿಣ ಮಧುರೈನ ಉಪ ಕಾರ್ಯದರ್ಶಿಯಾಗಿದ್ದ ಮಣಿಕಂಠನ್‌ (40) ಕೊಲೆಯಾದ ವ್ಯಕ್ತಿ.

ಮಣಿಕಂಠನ್‌ ತನ್ನ ಅಂಗಡಿಯ ಬಳಿ ನಡೆದುಕೊಂಡು ಹೋಗುತ್ತಿರುವ ವೇಳೆ ಇಬ್ಬರು ಅಪರಿಚಿತರು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಈ ವೇಳೆ ಕಲ್ಲುಗಳು ಮತ್ತು ಕುಡುಗೋಲಿನಿಂದ ಮಣಿಕಂಠನ್‌ ಅವರ ಮೇಲೆ ತೀವ್ರವಾದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ತೀವ್ರ ಗಾಯಗೊಂಡ ಮಣಿಕಂಠನ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಜೈಹಿಂದಪುರಂ ಪೊಲೀಸ್ ಠಾಣಾ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next