Advertisement

ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ತೂರಿದ ತಮಿಳುನಾಡು ಸಚಿವ ; ವೈರಲ್ ವಿಡಿಯೋ

03:18 PM Jan 24, 2023 | Team Udayavani |

ತಿರುವಳ್ಳೂರು: ತನಗೆ ಕುಳಿತುಕೊಳ್ಳಲು ಕುರ್ಚಿ ತರಲು ವಿಳಂಬ ಮಾಡಿದ ಪಕ್ಷದ ಕಾರ್ಯಕರ್ತನ ಮೇಲೆ ತಮಿಳುನಾಡು ಸಚಿವ ಎಸ್‌ಎಂ ನಾಸರ್ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದ್ದು, ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.

Advertisement

ಬಯಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಕುರ್ಚಿಗಳನ್ನು ತೆಗೆದುಕೊಂಡು ಓಡೋಡಿ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸಚಿವರ ಈ ರೀತಿಯ ವರ್ತನೆಗೆ ವಿಪಕ್ಷಗಳು ವ್ಯಾಪಕ ಟೀಕೆ ಮಾಡಿವೆ.

ಕಳೆದ ವರ್ಷ, ಎಸ್‌ಎಂ ನಾಸರ್ ಅವರು ಕೇಂದ್ರ ಸರ್ಕಾರವು ಹಾಲಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿದೆ ಎಂದು ಸುಳ್ಳು ಮಾಹಿತಿ ನೀಡಿ ಸುದ್ದಿಯಾಗಿ ಟೀಕೆಗೆ ಗುರಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next