Advertisement

BJP’ಎನ್ ಮಣ್ ಎನ್ ಮಕ್ಕಳ್’ ಸಮಾರೋಪದಲ್ಲಿ ಪ್ರಧಾನಿ ಮೋದಿ: ಅಣ್ಣಾಮಲೈ

06:46 PM Feb 19, 2024 | Team Udayavani |

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಪಲ್ಲಡಂನಲ್ಲಿ ‘ಎನ್ ಮಣ್ ಎನ್ ಮಕ್ಕಳ್’ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಹೇಳಿದ್ದಾರೆ.

Advertisement

ಬಿಜೆಪಿ ಕಾರ್ಯ ಕಾರಿಣಿಯಲ್ಲಿ ಭಾಗಿಯಾಗಿ ಸೋಮವಾರ ಬೆಳಗ್ಗೆ ಚೆನ್ನೈಗೆ ಆಗಮಿಸಿದ ಅಣ್ಣಾಮಲೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಎರಡು ದಿನಗಳ ತಮಿಳುನಾಡು ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಫೆಬ್ರವರಿ 27 ರಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಫೆಬ್ರವರಿ 28 ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕೆ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಫೆಬ್ರವರಿ 27 ರಂದು 234 ನೇ ವಿಧಾನಸಭಾ ಕ್ಷೇತ್ರವಾದ ತಿರುಪುರ್ ಜಿಲ್ಲೆಯ ಪಲ್ಲಡಂ ಅನ್ನು ಪ್ರವೇಶಿಸಿ ಬೃಹತ್ ಸಮಾವೇಶದೊಂದಿಗೆ ಸಮಾರೋಪಗೊಳ್ಳಲಿದೆ. ಲಕ್ಷಾಂತರ ಜನ ಬಿಜೆಪಿ ಕಾರ್ಯಕರ್ತರು ಭಾಗಿಯಾಗಲು ಸಿದ್ಧತೆ ನಡೆಸಲಾಗುತ್ತಿದೆ.

ಕಳೆದ ವರ್ಷ ಜುಲೈ ತಿಂಗಳಿನಲ್ಲಿ ರಾಮೇಶ್ವರ ದಲ್ಲಿ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next