Advertisement

ಜಿಹಾದಿ ದಾಳಿ ಸಂಚು ವಿಫಲ; ಬೆಂಗಳೂರಿನ ಮೂವರು ಸೇರಿ 8 ಆರೋಪಿಗಳ ಬಂಧನ

10:09 AM Jan 10, 2020 | Team Udayavani |

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಂಚನ್ನು ಇತ್ತೀಚೆಗೆ ತಮಿಳುನಾಡು ಪೊಲೀಸರು ವಿಫಲಗೊಳಿಸಿದ್ದು, ಪ್ರಕರಣದಲ್ಲಿ ತಮಿಳುನಾಡಿನ ಐವರು ಹಾಗೂ ಬೆಂಗಳೂರಿನ ಮೂವರು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಆರೋಪಿಗಳನ್ನು ಚೆನ್ನೈ ಕೋರ್ಟ್ ಗೆ ಹಾಜರುಪಡಿಸಿದ್ದು, ಎಂಟು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ ಎಂದು ವರದಿ ವಿವರಿಸಿದೆ.

ಬೆಂಗಳೂರಿನ ಮೊಹಮ್ಮದ್ ಹನೀಫ್ ಖಾನ್ (29ವರ್ಷ), ಇಮ್ರಾನ್ ಖಾನ್ (32ವರ್ಷ) ಮತ್ತು ಮೊಹಮ್ಮದ್ ಝೈದ್ (24ವರ್ಷ)ನನ್ನು ಬಂಧಿಸಿರುವುದಾಗಿ ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲಾ ಜಿಹಾದಿ ದಾಳಿ ನಡೆಸಲು ಸಂಚು ರೂಪಿಸಿದ್ದು ಕರ್ನಾಟಕ ಪೊಲೀಸರು ಹಾಗೂ ಇತರ ಗುಪ್ತಚರ ಇಲಾಖೆ ಸಹಾಯದೊಂದಿಗೆ ತಮಿಳುನಾಡು ಕ್ಯೂ ಬ್ರ್ಯಾಂಚ್ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಮೂಲಭೂತವಾದಿ ಜಿಹಾದಿಗಳು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಂಚು ರೂಪಿಸಿರುವ ಬಗ್ಗೆ ತಮಿಳುನಾಡು ಗುಪ್ತಚರ ವಿಭಾಗ ಮಾಹಿತಿಯನ್ನು ಪಡೆದಿತ್ತು. ಈ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುವ ಮೂಲಕ ಎಂಟು ಆರೋಪಿಗಳನ್ನು ಸೆರೆ ಹಿಡಿಯಲಾಗಿತ್ತು ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next