Advertisement

Vande Bharat Express: ತಮಿಳುನಾಡಿನಲ್ಲಿ ಚೆನ್ನೈ-ಮೈಸೂರು ರೈಲಿಗೆ ಕಲ್ಲು ತೂರಾಟ

03:46 PM Jul 14, 2023 | Team Udayavani |

ಚೆನ್ನೈ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ನಿರಂತರವಾಗಿ ಕಲ್ಲು ತೂರಾಟ ಘಟನೆಗಳು ವರದಿಯಾಗುತ್ತಿವೆ. ಇದೀಗ ಮತ್ತೊಂದು ಘಟನೆ ಇಂದು (ಜು.4) ತಮಿಳುನಾಡಿನಲ್ಲಿ ನಡೆದಿದೆ.

Advertisement

ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಕಿಟಕಿಗಳಿಗೆ ಹಾನಿಯಾಗಿದೆ. ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಈ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಇದೇ ರೀತಿಯ ಕಲ್ಲು ತೂರಾಟ ನಡೆಸಿದ್ದರು.

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್​​ನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದರು. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಎಂಬ ಪ್ರಶಂಸೆಗೆ ಪಾತ್ರವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next