Advertisement

ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುವುದು ಸರಿಯಲ್ಲ : ಸಿಎಂ

11:38 AM Jul 17, 2021 | Team Udayavani |

ಬೆಂಗಳೂರು : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುವುದು ಸರಿಯಲ್ಲ. ಈ ಯೋಜನೆ ಜಾರಿಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಿಲ್ಲ. ಈ ಬಗ್ಗೆ ಸಂಬಂಧ ಪಟ್ಟವರಿಗೆ ಮನವರಿಕೆ ಮಾಡಿ ಯೋಜನೆ ಆದಷ್ಟು ಶೀಘ್ರ ಆರಂಭಿಸುತ್ತೇವೆ. ಎರಡೂ ರಾಜ್ಯ ಗಳು ಸಹೋದರರಂತೆ ನಡೆದುಕೊಳ್ಳಬೇಕೆಂಬುದು ನನ್ನ ಆಶಯವಾಗಿದೆ.‌ ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ನನ್ನ ರಾಜೀನಾಮೆ ಕೇಳಿಲ್ಲ.‌ ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಶುದ್ದ ಸುಳ್ಳು. ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಆಗಮಿಸಿ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಹಿರಿಯ ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ನವದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ.

Advertisement

Udayavani is now on Telegram. Click here to join our channel and stay updated with the latest news.

Next