Advertisement

ಪ್ರಧಾನಿ ಮೋದಿ, ಅಮಿತ್ ಶಾ ಹತ್ಯೆಗೆ ಕರೆ: ತಮಿಳು ಬರಹಗಾರ, ವಾಗ್ಮಿ ಕಣ್ಣನ್ ಬಂಧನ

09:50 AM Jan 03, 2020 | Mithun PG |

ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳು ಬರಹಗಾರ, ವಾಗ್ಮಿ ನೆಲ್ಲೈ ಕಣ್ಣನ್ ಅವರನ್ನು ಪೆರಂಬಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಷಿಯಲ್​ ಡೆಮಾಕ್ರಟಿಕ್​ ಪಾರ್ಟಿ ಆಫ್​ ಇಂಡಿಯಾ ಡಿಸೆಂಬರ್ 29 ರಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡುತ್ತ ಕಣ್ಣನ್​, ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಬಹಿರಂಗವಾಗಿ ಕರೆ ನೀಡಿದ್ದರು. ಅಮಿತ್​ ಷಾ ಅವರು ಪ್ರಧಾನಿ ಮೋದಿಯವರ ಮಿದುಳು ಇದ್ದಂತೆ. ಅಮಿತ್​ ಷಾ ಕರೆ ಮುಗಿದರೆ ಮೋದಿಯವರ ಕತೆ ಮುಗಿದಂತೆ. ಅಷ್ಟಾದರೂ ಕೂಡ ಯಾವ ಮುಸ್ಲಿಮರೂ ಇನ್ನು ಅವರಿಬ್ಬರನ್ನು ಹತ್ಯೆ ಮಾಡಲು ಮುಂದಾಗುತ್ತಿಲ್ಲ. ಇದು ನನಗೆ ಅಚ್ಚರಿ ತಂದಿದೆ ಎಂದು ಹೇಳುವ ವಿವಾದ ಸೃಷ್ಟಿಸಿದ್ದರು.

ನೆಲ್ಲೈ ಕಣ್ಣನ್​ ಅವರ ಮಾತುಗಳು ಹಿಂಸೆಯನ್ನು ಪ್ರಚೋದಿಸುವಂತಿದೆ ಎಂದು ಪ್ರತಿಪಾದಿಸಿ ಒಟ್ಟು 15 ದೂರುಗಳು ದಾಖಲಾಗಿದ್ದವು. ಪೊಲೀಸರು ಪ್ರತ್ಯೇಕ ಎಫ್ ​ಐ ಆರ್​ ಕೂಡ ದಾಖಲಿಸಿದ್ದರು. ಬಿಜೆಪಿ ಹಿರಿಯ ನಾಯಕರಾದ ಪಾನ್​ ರಾಧಾಕೃಷ್ಣನ್​, ಸಿ.ಪಿ.ರಾಧಾಕೃಷ್ಣನ್​, ಎಲ್​. ಗಣೇಶನ್​ ಹಾಗೂ ಎಚ್. ರಾಜಾ ಅವರು ಮರೀನಾ ಬೀಚ್​ನಲ್ಲಿರುವ ಗಾಂಧಿ ಪ್ರತಿಮೆ ಬಳಿ ಕುಳಿತು ಪ್ರತಿಭಟನೆ ಮಾಡುವ ಮೂಲಕ ನೆಲ್ಲೈ ಕಣ್ಣನ್​ ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next