Advertisement

ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಆಸ್ತಿ ಹರಾಜಿಗೆ ಕೋರ್ಟ್ ಅಸ್ತು

05:57 PM Jan 26, 2023 | Team Udayavani |

ತಮಿಳುನಾಡು: ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಹರಾಜು ಹಾಕಲು ಕೋರ್ಟ್ ಅನುಮತಿ ನೀಡಿದೆ.

Advertisement

ಈ ಹಿಂದೆ ಅಕ್ರಮ ಆಸ್ತಿ ಗಳಿಸಿದ್ದಾರೆಂಬ ದೂರಿನ ಮೇಲೆ ದಾಳಿ ಮಾಡಿದ ಅಧಿಕಾರಿಗಳಿಗೆ ಜಯಲಲಿತಾ ಅವರ ಮನೆಯಲ್ಲಿ ದಾಖಲೆಗಳಿಲ್ಲದ ಚಿನ್ನಾಭರಣ, ವಾಚ್ ಹಾಗೂ ಸೀರೆಗಳು ಪತ್ತೆಯಾಗಿತ್ತು ಇದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆದರೆ ಜಯಲಲಿತಾ ಅವರು ನಿಧನರಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಶದಲ್ಲಿರುವ ಆಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡುವಂತೆ ಆರ್ ಟಿಐ ಕಾರ್ಯಕರ್ತ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದ್ದರು.

ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಶಪಡಿಸಿಕೊಂಡ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತವಾದ ಅಧಿಕಾರಿಯನ್ನು ನೇಮಿಸುವಂತೆ ಜೊತೆಗೆ ಬಂದ ಹಣದಲ್ಲಿ ಕರ್ನಾಟಕ ಸರ್ಕಾರ ಖರ್ಚು ಮಾಡಿದ್ದ 5 ಕೋಟಿಯನ್ನು ತನ್ನಲ್ಲೇ ಇಟ್ಟುಕೊಂಡು ಉಳಿದ ಬಾಕಿ ಹಣವನ್ನು ತಮಿಳುನಾಡಿನ ಸರ್ಕಾರಕ್ಕೆ ನೀಡುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಕಿಡಿಗೇಡಿಗಳಿಂದ ಹಿಂದೂ ದೇಗುಲ ಧ್ವಂಸ; ಭಾರತದಿಂದ ಖಂಡನೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next