Advertisement

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬಸ್‌ಗೆ ಟಂಟಂ ಡಿಕ್ಕಿ; ಮೂವರ ಸಾವು

11:44 PM Oct 02, 2019 | Team Udayavani |

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿ ದಾಖಲೆ ಪರಿಶೀಲಿಸಲು ನಿಂತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಟಂಟಂ ವಾಹನ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಘಟನೆಯಿಂದ ಉದ್ರಿಕ್ತ ಸ್ಥಳೀಯರು ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿ, ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದರು.

Advertisement

ಕೊಲ್ಹಾರ ಪಟ್ಟಣದಲ್ಲಿ ಪೊಲೀಸರು ವಾಹನಗಳ ದಾಖಲೆ ಪರಿ ಶೀಲಿ ಸುತ್ತಿದ್ದರು. ಇದನ್ನು ದೂರದಿಂದಲೇ ಗಮನಿಸಿದ ಪ್ರಯಾ ಣಿಕರನ್ನು ಸಾಗಿಸುತ್ತಿದ್ದ ಟಂಟಂ ವಾಹನದ ಚಾಲಕ, ಪೊಲೀಸರಿಂದ ತಪ್ಪಿಸಿಕೊಳ್ಳಲು ವೇಗ ಹೆಚ್ಚಿಸಿದಾಗ ಎದುರಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿ ಹೊಡೆಯಿತು. ಮೃತರನ್ನು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ರಾಮಣ್ಣ (62), ಕಸ್ತೂರಿ ಬಾಗಲಕೋಟೆ (4), ಬೀಳಗಿಯ ಕಸ್ತೂರಿ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇತರ 8 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.

ದುರ್ಘ‌ಟನೆಗೆ ಚಾಲಕರಿಗೆ ಪೊಲೀಸರು ನೀಡುತ್ತಿರುವ ಕಿರುಕುಳ ಕಾರಣ ಎಂದು ಆರೋಪಿಸಿದ ಉದ್ರಿಕ್ತರು, ಸ್ಥಳದಲ್ಲಿದ್ದ ಕೊಲ್ಹಾರ ಪಿಎಸ್‌ಐ ವಾಹನಕ್ಕೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ವಾಹನ, ಸಾರಿಗೆ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆಸಿದರು. ಘಟನೆಯಿಂದ ಕೊಲ್ಹಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next