Advertisement

ಹುಣಸೂರು : ಕಾರಿನ ಟೈರ್ ಪಂಚರ್ ಆಗಿ ಟ್ಯಾಂಕರ್ ಗೆ ಢಿಕ್ಕಿ; ಯುವತಿಯರಿಬ್ಬರ ಸಾವು

09:22 PM Jun 18, 2022 | Team Udayavani |

ಹುಣಸೂರು : ಮೈಸೂರು-ಹುಣಸೂರು ಹೆದ್ದಾರಿ 275ರ ರಂಗಯ್ಯನಕೊಪ್ಪಲು ಗೇಟ್ ಬಳಿ ಹಾಲಿನ ಟ್ಯಾಂಕರ್ ಮತ್ತು ಕಾರಿನ ನಡುವೆ ನಡೆದ ಶನಿವಾರ ಸಂಜೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ.

Advertisement

ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ದಾಖಲೆಯಿಂದ ಮೃತರ ಗುರುತು ಪತ್ತೆಯಾಗಿದ್ದು,ಮೈಸೂರು ನಗರದ ಚಂದ್ರಶೇಖರ್ ಮೂರ್ತಿ ಪುತ್ರಿ, ಸಾಫ್ಟ್ ವೇರ್ ಇಂಜಿನಿಯರ್ ಜೀವಿತಾ(24) ಹಾಗೂ ಆಕೆಯ ಸ್ನೇಹಿತೆ ಕೆ.ಪಿ.ಅಗ್ರಹಾರದ ಪ್ರಸನ್ನರ ಪುತ್ರಿ ಪ್ರತಿಕ್ಷಾ(24) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ.

ಘಟನೆ ವಿವರ

ವಾರಾಂತ್ಯವಾದ ಹಿನ್ನೆಲೆಯಲ್ಲಿ ಇಬ್ಬರೂ ಕಾರಿನಲ್ಲಿ ಮೈಸೂರು ಕಡೆಯಿಂದ ಶನಿವಾರ ಸಂಜೆ ವೇಳೆ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಮುಂಬದಿಯ ಟೈರ್ ಪಂಚರ್ ಆಗಿ ಹುಣಸೂರು ಕಡೆಯಿಂದ ಬರುತ್ತಿದ್ದ ಹಾಲಿನ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ತೀವ್ರಗಾಯಗೊಂಡ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ಕಂಡ ವಾಹನ ಸವಾರರು ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಶವಗಳನ್ನು ಮೈಸೂರು ಕೆ.ಆರ್.ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿ, ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

Advertisement

ಘಟನೆಯಿಂದ ಕೆಲಹೊತ್ತು ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ಥವಾಗಿತ್ತು. ಪೊಲೀಸರು ಸಕಾಲಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next