Advertisement

ಬರ ಪೀಡಿತ ತಾಲೂಕುಗಳಲ್ಲಿ ಟ್ಯಾಂಕರ್‌ ನೀರು ಪೂರೈಕೆ

08:23 AM Oct 13, 2018 | Team Udayavani |

ಬೆಂಗಳೂರು: ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಕೊರತೆ ಇರುವ ಕಡೆ ಟ್ಯಾಂಕರ್‌ ಮೂಲಕ ಇಲ್ಲವೇ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಂಡು ನೀರು ಪೂರೈಸಬೇಕು ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯದ ಎಲ್ಲ  ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಅವರು, ಕುಡಿಯುವ ನೀರು ಪೂರೈಕೆ ಮಾಡಲು ಖಾಸಗಿ
ಕೊಳವೆ ಬಾವಿಗಳನ್ನು ವಶಕ್ಕೆ ಪಡೆಯಲು ಅವಕಾಶವಿದ್ದು ಆ ಕೊಳವೆ ಬಾವಿಗಳ ಮಾಲೀಕರಿಗೆ ಸರ್ಕಾರದಿಂದಲೇ ಹಣ ಪಾವತಿಸಲಾಗುವುದು ಎಂದು
ಹೇಳಿದರು.

Advertisement

ಬರಗಾಲ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಜಿಲ್ಲಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಕೊರತೆಯಾಗಬಾರದು ಎಂದು ತಾಕೀತು ಮಾಡಿದರು. ಸದ್ಯಕ್ಕೆ ರಾಜ್ಯದ 13 ಜಿಲ್ಲೆಗಳ 352 ಹಳ್ಳಿಗಳಿಗೆ ಟ್ಯಾಂಕರ್‌ ಮತ್ತು ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ . ಬರಪೀಡಿತ ಎಂದು 
ಘೋಷಿಸಿರುವ 86 ತಾಲೂಕುಗಳಿಗೂ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ತಲಾ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಜಾನುವಾರುಗಳಿಗೆ
ಮೇವಿಗಾಗಿ ಪಸು ಸಂಗೋಪನಾ ಇಲಾಖೆಗೆ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next