Advertisement
ನಗರದ ನೆಹರೂ ಮೈದಾನದಲ್ಲಿ ಸೋಮ ವಾರ ನಡೆದ ಜಿಲ್ಲಾಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಅವರು, ದ.ಕ. ಜಿಲ್ಲೆಯ ಪ್ರವಾಸೋದ್ಯಮ ಆಕರ್ಷಣೆಗಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಸಹ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಅಭಿವೃದ್ಧಿಗೊಳಿಸಲಾಗುತ್ತಿದೆ. ಅಂದಾಜು 23.60 ಕೋ.ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
Related Articles
Advertisement
ಆಕರ್ಷಕ ಪಥಸಂಚಲನ
ಮಂಗಳೂರು ನಗರ ಸಂಚಾರ ಉಪ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಕವಾಯತು ದಂಡನಾಯಕರಾಗಿ, ಸಿಎಆರ್ ಮೀಸಲು ಪೊಲೀಸ್ ಪೊಲೀಸ್ ನಿರೀಕ್ಷಕರಾದ ಸುಬ್ರಹ್ಮಣ್ಯ ಎಂ. ಕವಾಯತು ಉಪ ದಂಡನಾಯಕರಾಗಿದ್ದರು.
ಮಂಗಳೂರು ಸಶಸ್ತ್ರ ಮೀಸಲು ಪೊಲೀಸ್ ಪಡೆ, ದ.ಕ. ಜಿಲ್ಲಾ ಪೊಲೀಸ್ ತುಕಡಿ, ಮಂಗಳೂರು ನಗರ ಸಿವಿಲ್ ಪೊಲೀಸ್ ತುಕಡಿ, ಮಂಗಳೂರು ನಗರ ಸಂಚಾರ ಪೊಲೀಸ್ ತುಕಡಿ, ಮಂಗಳೂರು ನಗರ ಮಹಿಳಾ ಪೊಲೀಸ್ ತುಕಡಿ, ರಾಜ್ಯ ಅಗ್ನಿಶಾಮಕ ದಳ, ರಾಜ್ಯ ಅಬಕಾರಿ ಇಲಾಖೆ, ಶಾರದಾ ವಿದ್ಯಾಲಯದ ವಿದ್ಯಾರ್ಥಿಗಳು, ಮೂಲ್ಕಿ ವ್ಯಾಸ ಮಹರ್ಷಿ ಶಾಲೆಯ ಬಾಲಕಿಯರು, ಬಾಲಕರು, ಸೈಂಟ್ ತೆರೆಸಾ ಸ್ಕೂಲ್ನ ಬಾಲಕಿಯರು, ಬಾಲಕರು ಹಾಗೂ ಪೊಲೀಸ್ ವಾದ್ಯ ತಂಡದಿಂದ ಆಕರ್ಷಕ ಪಥಸಂಚಲನ ನಡೆಯಿತು.
ಸಾರ್ಟ್ಸಿಟಿ; 523 ಕೋ.ರೂ ಕಾಮಗಾರಿ ಪೂರ್ಣ
ಮಂಗಳೂರು ಸ್ಮಾರ್ಟ್ಸಿಟಿ ಯೋಜನೆಯಡಿ ಕೇಂದ್ರ, ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ 1 ಸಾವಿರ ಕೋ.ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಿಸಲಾಗುತ್ತಿದೆ. ಈ ಪೈಕಿ ಈಗಾಗಲೇ 523 ಕೋ.ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿ ಪೂರ್ಣವಾಗಿದೆ. ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 130 ಕೋ.ರೂ. ಅನುದಾನ ಮಂಜೂರು ಮಾಡಲಾಗಿದೆ. ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ 35 ಮನೆಗಳು ಪೂರ್ಣವಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.