Advertisement

ಪ್ರತಾಪ ಸಿಂಹ ಮತಾಂತರವಾಗಲಿ: ಬಹಿರಂಗ ಆಹ್ವಾನ ನೀಡಿದ ಶಾಸಕ ತನ್ವೀರ್ ಸೇಠ್

02:39 PM Feb 07, 2022 | Team Udayavani |

ಮೈಸೂರು: ತನ್ವೀರ್ ಪೂರ್ವಜರು ಮತಾಂತರವಾಗಿದ್ದರು ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ತನ್ವೀರ್ ಸೇಠ್, ‘ಪ್ರತಾಪ ಸಿಂಹ ಕೂಡಾ ಮತಾಂತರವಾಗಲಿ’ ಎಂದು ಬಹಿರಂಗವಾಗಿಯೇ ಆಹ್ವಾನ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸದ ಪ್ರತಾಪ ಸಿಂಹ ಯಾವ ಮನಸ್ಥಿತಿಯಲ್ಲಿ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ಮಾನಸಿಕ ಸಮತೋಲನ ಕಳೆದುಕೊಂಡಿರಬಹುದು. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಬೇಕಾದರೆ ಅವರೇ ಮತಾಂತರವಾಗಲಿ’ ಎಂದರು.

ಸಮವಸ್ತ್ರದ ವಿಚಾರವಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಕಾನೂನು ಬಾಹಿರವಾದ ಆದೇಶ. ಏಕಾಏಕಿಯಾಗಿ ಆದೇಶ ಹೊರಡಿಸಿದ್ದಾರೆ. ಇದು ಏಕಪಕ್ಷೀಯವಾದ ನಿರ್ಧಾರ. ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಇದನ್ನೂ ಓದಿ:ಹಿಜಾಬ್ ವಿವಾದದ ಹಿಂದೆ ಯಾವುದೋ ಕಾಣದ ಶಕ್ತಿ ಕೆಲಸ ಮಾಡುತ್ತಿದೆ: ಆರಗ ಜ್ಞಾನೇಂದ್ರ

ಹಿಜಾಬ್ ವಿಚಾರ ನ್ಯಾಯಾಲಯದ ಮುಂದೆಯಿದೆ. ನ್ಯಾಯಾಲಯದ ಬೆಳವಣಿಗೆ ಕಾದು ನೋಡಬೇಕಿದೆ. ಮದ್ರಾಸ್ ಹೈ ಕೋರ್ಟ್ ಮಹಾರಾಷ್ಟ್ರದಲ್ಲಿ ಅವಕಾಶ ನೀಡಲಾಗಿದೆ. ಅದರ ಆದೇಶದ ಪ್ರತಿ ನಮ್ಮ ಬಳಿ ಇದೆ. ಇದೆಲ್ಲವನ್ನು ರಾಜಕೀಯ ದುರುದ್ದೇಶ ಹಾಗೂ ಓಟ್ ಬ್ಯಾಂಕ್‌ಗಾಗಿ ಮಾಡಲಾಗುತ್ತಿದೆ ಎಂದು ತನ್ವೀರ್ ಸೇಠ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next