Advertisement

Hunsur: ಟಿಎಪಿಸಿಎಂಎಸ್ ಅಧ್ಯಕ್ಷ ಶ್ರೀಗೌಡ ನಿಧನ

11:42 AM Dec 03, 2023 | Team Udayavani |

ಹುಣಸೂರು: ತಾಲೂಕಿನ ಜೆಡಿಎಸ್ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಹಾಗೂ ಬನ್ನಿಕುಪ್ಪೆ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿದ್ದ ಶ್ರೀಗೌಡ (57)ಅನಾರೋಗ್ಯದಿಂದಾಗಿ ಡಿ.1 ರ ಶುಕ್ರವಾರ ನಿಧನರಾದರು.

Advertisement

ಇವರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಸ್ವಗ್ರಾಮ ಬಿಳಿಕೆರೆ ಹೋಬಳಿಯ ಕುಪ್ಪೆಯ ಅವರ ಜಮೀನಿನಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.

ಶಾಸಕ ಜಿ.ಡಿ.ಹರೀಶ್‌ಗೌಡ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ರಾಜ್ಯ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ಲಲಿತಾ ಜಿ.ಟಿ.ದೇವೇಗೌಡ, ಟಿಎಪಿಸಿಎಂಎಸ್ ನಿರ್ದೇಶಕರು  ಸೇರಿದಂತೆ ಅನೇಕ ಗಣ್ಯರು ಭೇಟಿ ಇತ್ತು ಅಂತಿಮ ದರ್ಶನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next