Advertisement

ಕೋವ್ಯಾಕ್ಸಿನ್ ಲಸಿಕೆ ಪಡೆದ ತರಳಬಾಳು ಶ್ರೀ

08:16 PM Mar 17, 2021 | Team Udayavani |

ಸಿರಿಗೆರೆ : ಇಲ್ಲಿನ ತರಳಬಾಳು ಜಗದ್ಗುರು ಪೀಠಾಧ್ಯಕ್ಷರಾದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಬೆಂಗಳೂರಿನ ವಿಕ್ಟೋರಿಯಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್‌ ಲಸಿಕೆ ಪಡೆದರು.

Advertisement

ಈ ಸಂದರ್ಭದಲ್ಲಿ ಸಂದೇಶ ನೀಡಿರುವ ತರಳಬಾಳು ಜಗದ್ಗುರುಗಳು, ವಿಶ್ವದೆಲ್ಲೆಡೆ ತಲ್ಲಣ ಸೃಷ್ಟಿಸಿದ ಮಹಾಮಾರಿ ಕೊರೊನಾ ಪಿಡುಗನ್ನು ಹೋಗಲಾಡಿಸಲು ಲಸಿಕೆ ಪಡೆಯುವುದೇ ಏಕೈಕ ಮಾರ್ಗ. ಸರ್ಕಾರದ ನಿಬಂಧನೆಗಳಂತೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಪಡೆಯಲು ಯಾರೂ ಭಯ ಪಡಬೇಕಾಗಿಲ್ಲ. ಸೂಜಿ ಚುಚ್ಚುವುದು ಗೊತ್ತೇ ಆಗುವುದಿಲ್ಲ. ಸಣ್ಣ ನೋವೂ ಆಗುವುದಿಲ್ಲ. ಆದ್ದರಿಂದ ಭಕ್ತಾದಿಗಳು ಮತ್ತು ಸಾರ್ವಜನಿಕರು ಯಾವುದೇ ಭಯವಿಲ್ಲದೆ ವ್ಯಾಕ್ಸಿನ್‌ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ಮೋದಿ ಆರೋಗ್ಯ ಕಾಳಜಿಗೆ ಪ್ರಶಂಸೆ: “ಮನೆ ಗೆದ್ದು ಮಾರು ಗೆಲ್ಲು’ ಎನ್ನುವಂತೆ ನಮ್ಮ ದೇಶದ ಎಲ್ಲಾ ಪ್ರಜೆಗಳಿಗೆ ಲಸಿಕೆ ಕೊಡುವುದಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆ ಪೂರೈಕೆ ಮಾಡುತ್ತಿರುವ ಪ್ರಧಾನಿ ಮೋದಿ ಮಾನವೀಯ ಗುಣ ಶ್ಲಾಘನೀಯ. ಇಡೀ ದೇಶದ ಜನರ ಆರೋಗ್ಯದ ದೃಷ್ಟಿಯಿಂದ ವ್ಯಾಪಕ ಕ್ರಮಗಳನ್ನು ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳಿಗೆ ಭಾರತದಲ್ಲಿ ಸಂಶೋಧಿಸಿದ ಲಸಿಕೆಯನ್ನು ಸರಬರಾಜು ಮಾಡುವ ಮೂಲಕ ಜಗತ್ತಿನ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ತೋರಿರುವುದು ಪ್ರಶಂಸನೀಯ ಎಂದು ಶ್ರೀಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next