Advertisement

ತರೀಕೆರೆ: ಹಳ್ಳದಲ್ಲಿ ಕೊಚ್ಚಿ ಹೋದ ಸ್ಕೂಟರ್ ಸವಾರ

11:10 AM Nov 20, 2021 | Team Udayavani |

ತರೀಕೆರೆ: ಸ್ಕೂಟರ್‍ ಸವಾರನೊಬ್ಬ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

Advertisement

ಪೊನ್ನಸ್ವಾಮಿ (45) ಕೊಚ್ಚಿ ಹೋಗಿದ್ದ ವ್ಯಕ್ತಿಯಾಗಿದ್ದು, ಹುಲಿತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಭಾರಿ ಪ್ರಮಾಣದ ನೀರು ಹರಿದು ಬಂದಿದ್ದು, ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಬೆಳಗ್ಗೆ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ:ಮಳೆಹಾನಿ ಪ್ರದೇಶಕ್ಕೆ ಶಾಸಕ ರಘುಮೂರ್ತಿ ಭೇಟಿ

ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ಹಾಗೂ ಸ್ಥಳಿಯರಿಂದ ಶೋಧಕಾರ್ಯ ನಡೆಸಲಾಗಿದ್ದು, ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next