ಕಾರ್ಯಕ್ರಮಗಳು ನಡೆದವು. ನಗರದ ಗಣೇಶ ಮೈದಾನದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
Advertisement
ಬಳಿಕ ಹೊಟೇಲ್ ಮಯೂರದಲ್ಲಿ ನಗರದ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 120ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದಚಿತ್ರಕಲಾ ಸ್ಪರ್ಧೆ ನಡೆಯಿತು. ತದನಂತರ ನಡೆದ ಸಭಾ ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಆರ್. ಸೆಲ್ವಮಣಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆಯ ರಚನೆ ಹಾಗೂ ಕಾರ್ಯಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿರುವುದು ಶ್ಲಾಘನೀಯ ಸಂಗತಿ. ಈ ನಿಟ್ಟಿನಲ್ಲಿಯೇ ಜಿಲ್ಲಾ ಆದಾಯ ತೆರಿಗೆ ಇಲಾಖೆ ಉತ್ತಮವಾಗಿ
ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಅಟ್ಟಲ್ ಹಾಗೂ ಕಿರಾಣಿ, ಬಟ್ಟೆ, ಫಾರ್ಮಾ, ಹೊಟೇಲ್, ಜ್ಯುವೇಲರಿ ಸೇರಿದಂತೆ ವಿವಿಧ ಸಂಘಗಳ ಪ್ರಮುಖರು ಉಪಸ್ಥಿತರಿದ್ದರು. ಅಂಚೆ ಇಲಾಖೆ ಸಿಬ್ಬಂದಿ ಮಂಗಲಾ ಭಾಗವತ ನಿರೂಪಿಸಿದರು. ಇಲಾಖೆಯ ಸಿಬ್ಬಂದಿ ಉಮಾಕಾಂತ, ಅಂಬಾದಾಸ ಹಾಗೂ ಝಾನ್ಸನ್ ಸ್ವಾಗತ ಗೀತೆ ಹಾಡಿದರು.