Advertisement
ಅವರು ಬುಧವಾರ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿಗಳ ಕಚೇರಿ ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಕ್ಷಯ ರೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ| ಜೆ.ಪಿ. ಆಳ್ವ ಅವರು “ಕಾಲ ಘಟಿಸುತ್ತಿದೆ’ (ಕ್ಲಾಕ್ ಈಸ್ ಟಿಕಿಂಗ್) ಎನ್ನುವುದು ವಿಶ್ವ ಕ್ಷಯ ರೋಗ ದಿನಾಚರಣೆಯ ಈ ವರ್ಷದ ಘೋಷಣ ವಾಕ್ಯವಾಗಿದ್ದು, ದ.ಕ. ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಕ್ಷಯ ರೋಗ ಮುಕ್ತ, ಮಾದರಿ ಜಿಲ್ಲೆಯಾಗಲಿ ಎಂದು ಆಶಿಸಿದರು.
Advertisement
ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ| ಬದ್ರುದ್ದೀನ್ ಎಂ.ಎನ್. ಸ್ವಾಗತಿಸಿದರು. ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ರಾಜೇಶ್, ಮಂಗಳೂರು ವಿಭಾಗದ ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ| ದೇವಿಗನ್ ಸಿ., ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಂಶೋಧನ ನಿರ್ದೇಶಕ ಡಾ| ಬಿ. ಸಂಜೀವ ರೈ, ಡಾ| ಆ್ಯಂಟನಿ ಸಿಲ್ವನ್ ಡಿ’ಸೋಜಾ, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಭ| ಜಸಿಂತಾ ಉಪಸ್ಥಿತರಿದ್ದರು. ವೆನಾÉಕ್ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ| ಶರತ್ ಬಾಬು ಎಸ್. ಅವರು ಕ್ಷಯ ರೋಗ ದಿನಾಚರಣೆಯ ಈ ವರ್ಷದ ಘೋಷಣ ವಾಕ್ಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಲೊಕೇಶ್ ವಂದಿಸಿದರು.
ಮಾಸ್ಕ್ ನಿಂದ ರಕ್ಷಣೆಒಂದು ವರ್ಷದಿಂದ ಮಾಸ್ಕ ನ್ನು ಕೊರೊನಾ ಸೋಂಕು ಹರಡುವುದನ್ನು ತಡೆಯಲು ಒಂದು ಅಸ್ತ್ರವಾಗಿ ಬಳಕೆ ಮಾಡಲಾಗುತ್ತಿದೆ. ಆದರೆ ಮಾಸ್ಕ್ ಧಾರಣೆಯಿಂದ ಇತರ ಪ್ರಯೋ ಜನಗಳೂ ಇವೆ. ಸಾಂಕ್ರಾಮಿಕ ರೋಗ ಹರಡುವುದನ್ನು ಇದು ತಡೆಯುತ್ತದೆ. ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ಕ್ಷಯ ರೋಗ ಪ್ರಮಾಣ ಕಡಿಮೆ ಮಾಡುವಲ್ಲಿ ಮಾಸ್ಕ್ ಧಾರಣೆ ಬಹಳಷ್ಟು ಪರಿಣಾಮಕಾರಿಯಾಗಿ ನೆರವಾಗಿದೆ ಎಂದು ಡಿಸಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು.