Advertisement

Tirupati laddu; ತನಿಖೆಗೆ ಸ್ವತಂತ್ರ ಎಸ್‌ಐಟಿ: ಸುಪ್ರೀಂ ನಿರ್ಧಾರಕ್ಕೆ ಟಿಡಿಪಿ ಸ್ವಾಗತ

06:11 PM Oct 04, 2024 | Team Udayavani |

ಅಮರಾವತಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಸ್ವತಂತ್ರ ವಿಶೇಷ ತನಿಖಾ ತಂಡವನ್ನು ರಚಿಸುವ ಸುಪ್ರೀಂ ಕೋರ್ಟ್ ತೀರ್ಪನ್ನು ಆಂಧ್ರಪ್ರದೇಶದ ಆಡಳಿತಾರೂಢ ತೆಲುಗು ದೇಶಂ ಪಕ್ಷ ಶುಕ್ರವಾರ(ಅ4 ) ಸ್ವಾಗತಿಸಿದೆ.

Advertisement

ಟಿಡಿಪಿ ವಕ್ತಾರ ಪಟ್ಟಾಭಿರಾಮ ಕೊಮ್ಮರೆಡ್ಡಿ ಮಾತನಾಡಿ, ”ಸತ್ಯವನ್ನು ಹೊರತರುವುದು ಮತ್ತು ವೆಂಕಟೇಶ್ವರ ಸ್ವಾಮಿಯ ಕೋಟ್ಯಂತರ ಭಕ್ತರ ಭಾವನೆಗಳೊಂದಿಗೆ ಆಟವಾಡಿದ ಅಪರಾಧಿಗಳನ್ನು ಶಿಕ್ಷೆಗೆ ಗುರಿ ಮಾಡುವುದು ರಾಜ್ಯ ಸರಕಾರದ ಉದ್ದೇಶವಾಗಿದೆ” ಎಂದರು.

”ಸುಪ್ರೀಂ ಕೋರ್ಟ್ ನಿರ್ದೇಶನವನ್ನು ನಾವು ಸ್ವಾಗತಿಸುತ್ತೇವೆ. ಅದರಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ. ಜಗತ್ತಿನಾದ್ಯಂತ ಕೋಟ್ಯಂತರ ಹಿಂದೂಗಳು ಆ ಅಪರಾಧಿಗಳನ್ನು ಕಂಬಿ ಹಿಂದೆ ಹಾಕಲು ಮತ್ತು ಅವರ ಭಾವನೆಗಳೊಂದಿಗೆ ಆಟವಾಡಿದ ಕಾರಣ ಅವರಿಗೆ ಕಠಿನ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ ”ಎಂದರು.

ಎಫ್‌ಎಸ್‌ಎಸ್‌ಎಐ ಹಿರಿಯ ಅಧಿಕಾರಿಯಲ್ಲದೆ ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತಲಾ ಇಬ್ಬರು ಅಧಿಕಾರಿಗಳನ್ನು ಎಸ್‌ಐಟಿ ಒಳಗೊಂಡಿರುತ್ತದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next