Advertisement

ಅನರ್ಹರಿಗೆ ತಕ್ಕ ಪಾಠ ಕಲಿಸಿ: ದಿನೇಶ್‌

10:41 PM Nov 25, 2019 | Team Udayavani |

ಕೆ.ಆರ್‌.ಪೇಟೆ: “ಬಿಜೆಪಿ ನಾಯಕರ ಅನೈತಿಕ ರಾಜಕಾರಣದಿಂದಾಗಿ ಉತ್ತಮವಾಗಿ ನಡೆ ಯುತ್ತಿದ್ದ ಮೈತ್ರಿ ಸರ್ಕಾರ ಬಿದ್ದು ಹೋಗು ವಂತಾಯಿತು. ಅದಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಉಪಚುನಾವಣೆಯಲ್ಲಿ ಸೋಲಿಸಿ ಮತದಾರರೇ ತಕ್ಕ ಪಾಠ ಕಲಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮನವಿ ಮಾಡಿದರು.

Advertisement

ಬಸವೇಶ್ವರ ಸರ್ಕಲ್‌ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿ, ಹಣದಿಂದ ಶಾಸಕರನ್ನು ಖರೀದಿಸಿ ಅನೈತಿಕ ಸರ್ಕಾರ ರಚನೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ. ಚಂದ್ರಶೇಖರ್‌ರನ್ನು ಗೆಲ್ಲಿಸಬೇಕು ಎಂದರು. ಕಾಂಗ್ರೆಸ್‌ ಸರ್ಕಾರವಿದ್ದಾಗ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಿ 5 ವರ್ಷ ಸ್ಥಿರ ಸರ್ಕಾರ ನೀಡಿದ್ದೇವೆ. ಇದನ್ನು ಅರಿತು ಕಾಂಗ್ರೆಸ್‌ ಅನ್ನು ಬೆಂಬಲಿಸಬೇಕು ಎಂದು ತಿಳಿಸಿದರು.

ಆಚಾರವಿಲ್ಲದ ಜೆಡಿಎಸ್‌: ಜೆಡಿಎಸ್‌ಗೆ ಆಚಾರ, ವಿಚಾರ, ನೀತಿ, ನಿಯಮ ಏನೂ ಇಲ್ಲ. ಈ ಹಿಂದೆ ನಮ್ಮ ಜತೆ ಮೈತ್ರಿ ಮಾಡಿ ಕೊಂಡು ಸರ್ಕಾರ ಮಾಡಿದ್ದರು. ಈಗ ಬಿಜೆಪಿ ಸರ್ಕಾರ ಬೀಳಲು ಬಿಡಲ್ಲ ಅಂತ ಹೇಳುತ್ತಿದ್ದಾರೆ. ಇಂತಹ ಜನ ರಾಜ್ಯವನ್ನು ಹೇಗೆ ಅಭಿವೃದ್ಧಿ ಮಾಡುತ್ತಾರೆ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next